<p><strong>ಬೆಂಗಳೂರು:</strong> ಎಂಟು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ ಹೆಣ್ಣೂರು ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅಂತೂ ಮುಕ್ತಾಯ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4ರಂದು ಉದ್ಘಾಟಿಸಲಿದ್ದಾರೆ.</p>.<p>ಆರಂಭದಲ್ಲಿ ಈ ಕಾಮಗಾರಿಗೆ ₹22 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿತ್ತು. ಬಳಿಕ ವೆಚ್ಚ ಎರಡೂ ವರೆ ಪಟ್ಟು ಹೆಚ್ಚಾಗಿತ್ತು. ರ್ಯಾಂಪ್ಗಳ ನಿರ್ಮಾಣಕ್ಕೆ ಅಗತ್ಯವಾದ 39 ಗುಂಟೆಸ್ವಾಧೀನ ಪಡಿಸಿಕೊಳ್ಳುವಲ್ಲಿ ಉಂಟಾಗಿದ್ದ ಗೊಂದಲಗಳಿಂದಾಗಿ ಕಾಮಗಾರಿ ನನೆಗುದಿಗೆ ಬಿದ್ದಿತ್ತು. 2016ರ ಜೂನ್ 28ರಂದು ಕಾಮಗಾರಿಗೆ ಮರುಚಾಲನೆ ನೀಡಲಾಗಿತ್ತು. ಆ ಬಳಿಕವೂ ಕುಂಟುತ್ತಾ ಸಾಗಿತ್ತು.</p>.<p>‘ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿವೆ. ಉದ್ಘಾಟನೆಗೂ ಮುನ್ನ ಅವುಗಳನ್ನು ಪೂರ್ಣಗೊಳಿಸುತ್ತೇವೆ. ಈ ಭಾಗದ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ಸಿಗಲಿದೆ’ ಎಂದು ಬಿಡಿಎ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಒಳಚರಂಡಿ ಮಾರ್ಗ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರಿಸುವ ಕೆಲಸ ಪೂರ್ಣಗೊಂಡಿದೆ ಎಂದರು.</p>.<p>ಕಳಪೆ ಕಾಮಗಾರಿ: ‘ಜನಪ್ರತಿನಿಧಿಗಳ ಒತ್ತಡದಿಂದ ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಗುಣಮಟ್ಟ ಕಾಯ್ದುಕೊಂಡಿಲ್ಲ’ ಎಂದು ಮುನಿರಾಜು ಆರೋಪಿಸಿದರು.</p>.<p>ಸ್ಥಳೀಯ ನಿವಾಸಿ ಜಗನ್ನಾಥ ರೆಡ್ಡಿ, ‘ಮೇಲ್ಸೇತುವೆ ರ್ಯಾಂಪ್ಗಳ ಉದ್ದವನ್ನು ಸುಮಾರು 100 ಅಡಿಯಷ್ಟು ಕಡಿಮೆ ಮಾಡಲಾಗಿದ್ದು, ಮೇಲ್ಸೇತುವೆ<br /> ಯಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ. ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಮೇಲ್ಸೇತುವೆ ಪಕ್ಕದ ರಸ್ತೆಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಕಾಮಗಾರಿ ಪೂರ್ಣಕ್ಕೆ ಅದೂ ತೊಡಕಾಗಿದೆ. ಸಮೀಪದಲ್ಲಿಯೇ ಬಿಡಿಎ ವತಿ<br /> ಯಿಂದ ಬದಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಆದರೆ, ಹಳೆಯ ದೇವಸ್ಥಾನವನ್ನು ತೆರವುಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮೇಲ್ಸೇತುವೆ ಕೆಳಗಿನ ಎರಡು ಬದಿಯ ರಸ್ತೆಗಳು ಹದಗೆಟ್ಟಿವೆ. ಬೃಹತ್ ಗಾತ್ರದ ಗುಂಡಿಗಳು ಬಿದ್ದಿವೆ. ಆ ರಸ್ತೆಗಳನ್ನು ಇನ್ನೂ ದುರಸ್ತಿಗೊಳಿಸಿಲ್ಲ. ಮೇಲ್ಸೇತುವೆ ಕೆಳ ಭಾಗದಲ್ಲಿ ಓಡಾಟ ನಡೆಸುವವರಿಗೆ ಇದರಿಂದ ತೊಂದರೆ ಉಂಟಾಗಲಿದೆ ಎಂದು ಕ್ಯಾಬ್ ಚಾಲಕ ಮಹೇಶ್ ಹೇಳಿದರು.</p>.<p>‘ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಗಡಿಬಿಡಿಯಲ್ಲಿ ಕಾಮಗಾರಿ ನಡೆಸಿರುವುದು ಸರಿಯಲ್ಲ. ಅಪೂರ್ಣ ಕಾಮಗಾರಿಯಿಂದ ಜನರಿಗೆ ತೊಂದರೆ<br /> ಯುಂಟಾದರೆ ಅದಕ್ಕೆ ಸರ್ಕಾರವೇ ಹೊಣೆ’ ಎಂದು ಹೋಟೆಲ್ ಮಾಲೀಕ ನರಸರೆಡ್ಡಿ ತಿಳಿಸಿದರು.</p>.<p>ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ₹1,200 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸುವ ಹಾಗೂ ಮುಖ್ಯ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 4ರಂದು ನೆರವೇರಿಸಲಿದ್ದಾರೆ.</p>.<p>ಉದ್ಘಾಟನೆ ಕಾರ್ಯಕ್ರಮವು ಮಾಗಡಿ ರಸ್ತೆಯ ನೈಸ್ ಜಂಕ್ಷನ್ ಬಳಿಯ ಮೈದಾನದಲ್ಲಿ ನಡೆಯಲಿದೆ.</p>.<p><strong>ಅಂಕಿ–ಅಂಶ</strong></p>.<p>600 ಮೀಟರ್ -ಹೆಣ್ಣೂರು ಮೇಲ್ಸೇತುವೆಯ ಉದ್ದ</p>.<p>₹ 54.64 ಕೋಟಿ -ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಂಟು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ ಹೆಣ್ಣೂರು ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅಂತೂ ಮುಕ್ತಾಯ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4ರಂದು ಉದ್ಘಾಟಿಸಲಿದ್ದಾರೆ.</p>.<p>ಆರಂಭದಲ್ಲಿ ಈ ಕಾಮಗಾರಿಗೆ ₹22 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿತ್ತು. ಬಳಿಕ ವೆಚ್ಚ ಎರಡೂ ವರೆ ಪಟ್ಟು ಹೆಚ್ಚಾಗಿತ್ತು. ರ್ಯಾಂಪ್ಗಳ ನಿರ್ಮಾಣಕ್ಕೆ ಅಗತ್ಯವಾದ 39 ಗುಂಟೆಸ್ವಾಧೀನ ಪಡಿಸಿಕೊಳ್ಳುವಲ್ಲಿ ಉಂಟಾಗಿದ್ದ ಗೊಂದಲಗಳಿಂದಾಗಿ ಕಾಮಗಾರಿ ನನೆಗುದಿಗೆ ಬಿದ್ದಿತ್ತು. 2016ರ ಜೂನ್ 28ರಂದು ಕಾಮಗಾರಿಗೆ ಮರುಚಾಲನೆ ನೀಡಲಾಗಿತ್ತು. ಆ ಬಳಿಕವೂ ಕುಂಟುತ್ತಾ ಸಾಗಿತ್ತು.</p>.<p>‘ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿವೆ. ಉದ್ಘಾಟನೆಗೂ ಮುನ್ನ ಅವುಗಳನ್ನು ಪೂರ್ಣಗೊಳಿಸುತ್ತೇವೆ. ಈ ಭಾಗದ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ಸಿಗಲಿದೆ’ ಎಂದು ಬಿಡಿಎ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಒಳಚರಂಡಿ ಮಾರ್ಗ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರಿಸುವ ಕೆಲಸ ಪೂರ್ಣಗೊಂಡಿದೆ ಎಂದರು.</p>.<p>ಕಳಪೆ ಕಾಮಗಾರಿ: ‘ಜನಪ್ರತಿನಿಧಿಗಳ ಒತ್ತಡದಿಂದ ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಗುಣಮಟ್ಟ ಕಾಯ್ದುಕೊಂಡಿಲ್ಲ’ ಎಂದು ಮುನಿರಾಜು ಆರೋಪಿಸಿದರು.</p>.<p>ಸ್ಥಳೀಯ ನಿವಾಸಿ ಜಗನ್ನಾಥ ರೆಡ್ಡಿ, ‘ಮೇಲ್ಸೇತುವೆ ರ್ಯಾಂಪ್ಗಳ ಉದ್ದವನ್ನು ಸುಮಾರು 100 ಅಡಿಯಷ್ಟು ಕಡಿಮೆ ಮಾಡಲಾಗಿದ್ದು, ಮೇಲ್ಸೇತುವೆ<br /> ಯಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ. ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಮೇಲ್ಸೇತುವೆ ಪಕ್ಕದ ರಸ್ತೆಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಕಾಮಗಾರಿ ಪೂರ್ಣಕ್ಕೆ ಅದೂ ತೊಡಕಾಗಿದೆ. ಸಮೀಪದಲ್ಲಿಯೇ ಬಿಡಿಎ ವತಿ<br /> ಯಿಂದ ಬದಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಆದರೆ, ಹಳೆಯ ದೇವಸ್ಥಾನವನ್ನು ತೆರವುಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮೇಲ್ಸೇತುವೆ ಕೆಳಗಿನ ಎರಡು ಬದಿಯ ರಸ್ತೆಗಳು ಹದಗೆಟ್ಟಿವೆ. ಬೃಹತ್ ಗಾತ್ರದ ಗುಂಡಿಗಳು ಬಿದ್ದಿವೆ. ಆ ರಸ್ತೆಗಳನ್ನು ಇನ್ನೂ ದುರಸ್ತಿಗೊಳಿಸಿಲ್ಲ. ಮೇಲ್ಸೇತುವೆ ಕೆಳ ಭಾಗದಲ್ಲಿ ಓಡಾಟ ನಡೆಸುವವರಿಗೆ ಇದರಿಂದ ತೊಂದರೆ ಉಂಟಾಗಲಿದೆ ಎಂದು ಕ್ಯಾಬ್ ಚಾಲಕ ಮಹೇಶ್ ಹೇಳಿದರು.</p>.<p>‘ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಗಡಿಬಿಡಿಯಲ್ಲಿ ಕಾಮಗಾರಿ ನಡೆಸಿರುವುದು ಸರಿಯಲ್ಲ. ಅಪೂರ್ಣ ಕಾಮಗಾರಿಯಿಂದ ಜನರಿಗೆ ತೊಂದರೆ<br /> ಯುಂಟಾದರೆ ಅದಕ್ಕೆ ಸರ್ಕಾರವೇ ಹೊಣೆ’ ಎಂದು ಹೋಟೆಲ್ ಮಾಲೀಕ ನರಸರೆಡ್ಡಿ ತಿಳಿಸಿದರು.</p>.<p>ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ₹1,200 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸುವ ಹಾಗೂ ಮುಖ್ಯ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 4ರಂದು ನೆರವೇರಿಸಲಿದ್ದಾರೆ.</p>.<p>ಉದ್ಘಾಟನೆ ಕಾರ್ಯಕ್ರಮವು ಮಾಗಡಿ ರಸ್ತೆಯ ನೈಸ್ ಜಂಕ್ಷನ್ ಬಳಿಯ ಮೈದಾನದಲ್ಲಿ ನಡೆಯಲಿದೆ.</p>.<p><strong>ಅಂಕಿ–ಅಂಶ</strong></p>.<p>600 ಮೀಟರ್ -ಹೆಣ್ಣೂರು ಮೇಲ್ಸೇತುವೆಯ ಉದ್ದ</p>.<p>₹ 54.64 ಕೋಟಿ -ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>