<p><strong>ನೆಲಮಂಗಲ: </strong>ರೈತ ಹಾಗೂ ಪರಿಸರ ಸ್ನೇಹಿ ಹೈನುಗಾರಿಕೆಯನ್ನು ಉಪ ಕಸುಬನ್ನಾಗಿಸಿಕೊಳ್ಳಲು ಸಣ್ಣ ಹಿಡುವಳಿದಾರರಿಗೆ ಹಸುಗಳನ್ನು ವಿತರಿಸಲಾಗುತ್ತಿದೆ. ಹೈನುಗಾರಿಕೆಯಿಂದ ಆದಾಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿ.ಪಂ. ಸದಸ್ಯ ಎಂ.ಎನ್.ರಾಮ್ ಅಭಿಪ್ರಾಯಪಟ್ಟರು.<br /> <br /> ಜಿ.ಪಂ.ನ ಆದಾಯ ಉತ್ಪನ್ನ ಚಟುವಟಿಕೆ ಯೋಜನೆಯಡಿ ತಾಲ್ಲೂಕಿನ ಕೋಡಪ್ಪನಹಳ್ಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಹಸುಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ಜೆಡಿಎಸ್ ಮುಖಂಡ ಕೋಡಪ್ಪನಹಳ್ಳಿ ವೆಂಕಟೇಶ್, ರೈತರು ಮಣ್ಣು ಪರೀಕ್ಷಿಸಿ, ಮಾರುಕಟ್ಟೆ ವಿಶ್ಲೇಷಿಸಿ, ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಸೂಕ್ತವಾದ ಬೆಳೆ ಬೆಳೆಯಬೇಕು ಎಂದು ಸಲಹೆ ಮಾಡಿದರು.<br /> <br /> ಇದೇ ಸಂದರ್ಭದಲ್ಲಿ ಗ್ರಾ.ಪಂ. ವ್ಯಾಪ್ತಿಯ ಆಯ್ದ 20 ಮಂದಿ ಫಲಾನುಭವಿಗಳಿಗೆ ಹಸುಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಮುನಿರಾಮಯ್ಯ, ಗ್ರಾ.ಪಂ. ಸದಸ್ಯ ನಾರಾಯಣ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಬೈಲಪ್ಪ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>ರೈತ ಹಾಗೂ ಪರಿಸರ ಸ್ನೇಹಿ ಹೈನುಗಾರಿಕೆಯನ್ನು ಉಪ ಕಸುಬನ್ನಾಗಿಸಿಕೊಳ್ಳಲು ಸಣ್ಣ ಹಿಡುವಳಿದಾರರಿಗೆ ಹಸುಗಳನ್ನು ವಿತರಿಸಲಾಗುತ್ತಿದೆ. ಹೈನುಗಾರಿಕೆಯಿಂದ ಆದಾಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿ.ಪಂ. ಸದಸ್ಯ ಎಂ.ಎನ್.ರಾಮ್ ಅಭಿಪ್ರಾಯಪಟ್ಟರು.<br /> <br /> ಜಿ.ಪಂ.ನ ಆದಾಯ ಉತ್ಪನ್ನ ಚಟುವಟಿಕೆ ಯೋಜನೆಯಡಿ ತಾಲ್ಲೂಕಿನ ಕೋಡಪ್ಪನಹಳ್ಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ಹಸುಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ಜೆಡಿಎಸ್ ಮುಖಂಡ ಕೋಡಪ್ಪನಹಳ್ಳಿ ವೆಂಕಟೇಶ್, ರೈತರು ಮಣ್ಣು ಪರೀಕ್ಷಿಸಿ, ಮಾರುಕಟ್ಟೆ ವಿಶ್ಲೇಷಿಸಿ, ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಸೂಕ್ತವಾದ ಬೆಳೆ ಬೆಳೆಯಬೇಕು ಎಂದು ಸಲಹೆ ಮಾಡಿದರು.<br /> <br /> ಇದೇ ಸಂದರ್ಭದಲ್ಲಿ ಗ್ರಾ.ಪಂ. ವ್ಯಾಪ್ತಿಯ ಆಯ್ದ 20 ಮಂದಿ ಫಲಾನುಭವಿಗಳಿಗೆ ಹಸುಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಮುನಿರಾಮಯ್ಯ, ಗ್ರಾ.ಪಂ. ಸದಸ್ಯ ನಾರಾಯಣ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಬೈಲಪ್ಪ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>