ಬೆಂಗಳೂರು: ರಾಜಸ್ತಾನ ಹೈಕೋರ್ಟ್ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ.
ನ್ಯಾಯಮೂರ್ತಿ ಚೌಹಾಣ್ ಅವರು ಇದೇ 12ರೊಳಗೆ ಪದಗ್ರಹಣ ಮಾಡುವಂತೆ ರಾಷ್ಟ್ರಪತಿಗಳು ತಮ್ಮ ಆದೇಶದಲ್ಲಿ ಸೂಚಿಸಿರುವುದಾಗಿ ಕೇಂದ್ರ ಕಾನೂನು ಸಚಿವಾಲಯದ ಪ್ರಕಟಣೆ ತಿಳಿಸಿದೆ.