<p>ಬೆಂಗಳೂರು: `ಪರಿಣಾಮಕಾರಿಯಾದ ಹಾಗೂ ಯಾವುದೇ ಅಡ್ಡಪರಿಣಾಮಗಳಿಲ್ಲದ ಹೋಮಿಯೋಪತಿ ವೈದ್ಯ ಪದ್ಧತಿ ಬಗ್ಗೆ ಸರ್ಕಾರ ಹಾಗೂ ಜನರು ಹೆಚ್ಚು ಆಸಕ್ತಿ ಹೊಂದದಿರುವ ಬೆಳವಣಿಗೆ ಸರಿಯಲ್ಲ~ ಎಂದು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ವಿಷಾದಿಸಿದರು.<br /> <br /> ಕರ್ನಾಟಕ ಹೋಮಿಯೋಪತಿ ಮಂಡಲಿ ಹಾಗೂ ಆಯುಷ್ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಹೋಮಿಯೋಪತಿ ದಿನದ ರ್ಯಾಲಿಗೆ ಪುರಭವನದ ಮುಂಭಾಗ ಚಾಲನೆ ನೀಡಿ ಮಾತನಾಡಿದ ಅವರು, `ಎಚ್1ಎನ್1 ನಂಥಾ ರೋಗಗಳಿಗೂ ಹೋಮಿಯೋಪತಿ ವೈದ್ಯ ಪದ್ಧತಿಯ ಮೂಲಕ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯವಿದೆ. <br /> <br /> ಆದರೆ ಸರ್ಕಾರ ಹಾಗೂ ಜನತೆಗೆ ಇನ್ನೂ ಈ ವೈದ್ಯ ಪದ್ಧತಿಯ ಬಗ್ಗೆ ಹೆಚ್ಚು ನಂಬಿಕೆ ಬಂದಿಲ್ಲ. ಸರ್ಕಾರ ಜನರಿಗೆ ಈ ಬಗ್ಗೆ ಅರಿವು ಮೂಡಿಸುವ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು~ ಎಂದು ಅವರು ಅಭಿಪ್ರಾಯಪಟ್ಟರು.<br /> ರ್ಯಾಲಿಯಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕರ್ನಾಟಕ ಹೋಮಿಯೋಪತಿ ಮಂಡಳಿಯ ಅಧ್ಯಕ್ಷ ಡಾ.ವೀರಭದ್ರಾಚಾರಿ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಪರಿಣಾಮಕಾರಿಯಾದ ಹಾಗೂ ಯಾವುದೇ ಅಡ್ಡಪರಿಣಾಮಗಳಿಲ್ಲದ ಹೋಮಿಯೋಪತಿ ವೈದ್ಯ ಪದ್ಧತಿ ಬಗ್ಗೆ ಸರ್ಕಾರ ಹಾಗೂ ಜನರು ಹೆಚ್ಚು ಆಸಕ್ತಿ ಹೊಂದದಿರುವ ಬೆಳವಣಿಗೆ ಸರಿಯಲ್ಲ~ ಎಂದು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ವಿಷಾದಿಸಿದರು.<br /> <br /> ಕರ್ನಾಟಕ ಹೋಮಿಯೋಪತಿ ಮಂಡಲಿ ಹಾಗೂ ಆಯುಷ್ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಹೋಮಿಯೋಪತಿ ದಿನದ ರ್ಯಾಲಿಗೆ ಪುರಭವನದ ಮುಂಭಾಗ ಚಾಲನೆ ನೀಡಿ ಮಾತನಾಡಿದ ಅವರು, `ಎಚ್1ಎನ್1 ನಂಥಾ ರೋಗಗಳಿಗೂ ಹೋಮಿಯೋಪತಿ ವೈದ್ಯ ಪದ್ಧತಿಯ ಮೂಲಕ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯವಿದೆ. <br /> <br /> ಆದರೆ ಸರ್ಕಾರ ಹಾಗೂ ಜನತೆಗೆ ಇನ್ನೂ ಈ ವೈದ್ಯ ಪದ್ಧತಿಯ ಬಗ್ಗೆ ಹೆಚ್ಚು ನಂಬಿಕೆ ಬಂದಿಲ್ಲ. ಸರ್ಕಾರ ಜನರಿಗೆ ಈ ಬಗ್ಗೆ ಅರಿವು ಮೂಡಿಸುವ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು~ ಎಂದು ಅವರು ಅಭಿಪ್ರಾಯಪಟ್ಟರು.<br /> ರ್ಯಾಲಿಯಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕರ್ನಾಟಕ ಹೋಮಿಯೋಪತಿ ಮಂಡಳಿಯ ಅಧ್ಯಕ್ಷ ಡಾ.ವೀರಭದ್ರಾಚಾರಿ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>