ಚುನಾವಣಾ ಸಂಚಾರ ದಳದ ಅಧಿಕಾರಿ ಕೆ.ಬಿಸೆತಪ್ಪ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಅಶೋಕನಗರ ಪೊಲೀಸರು ತಿಳಿಸಿದರು. ‘ಏಪ್ರಿಲ್ 23ರಂದು ಮಧ್ಯಾಹ್ನ ಎನ್.ಎ.ಹ್ಯಾರಿಸ್, ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಹೊರಟಿದ್ದರು. ವಾಹನದಲ್ಲಿ ಧ್ವನಿವರ್ಧಕ ಅಳವಡಿಸಿಕೊಂಡು ಪ್ರಚಾರ ಮಾಡುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.