<p><strong>ಬೆಂಗಳೂರು:</strong> ‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನಂಥವರನ್ನು ಕಂಡರೆ ಬಿಜೆಪಿಯವರಿಗೆ ಕಣ್ಣುರಿ. ರಾಜ್ಯದ ಗೃಹ ಸಚಿವ ಅಯೋಗ್ಯ ಎಂದು ಹೇಳಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಅದೆಷ್ಟು ಧೈರ್ಯ’ ಎಂದು ಕೆ.ಜೆ. ಜಾರ್ಜ್ ಕಿಡಿಕಾರಿದರು.<br /> <br /> ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮುಗಲಭೆಗಳ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸುವ ಮೂಲಕ ನಮ್ಮ ಸರ್ಕಾರ ಯಾವುದೇ ಸಮುದಾಯವನ್ನು ತುಷ್ಟೀಕರಿಸುವ ಯತ್ನ ನಡೆಸಿಲ್ಲ’ ಎಂದರು.<br /> ‘ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯುವುದು ರಾಜ್ಯ ಸರ್ಕಾರ ಎಸಗಿದ ರಾಷ್ಟ್ರದ್ರೋಹದ ಕೆಲಸ, ಜಾರ್ಜ್ ಅಯೋಗ್ಯ ಗೃಹ ಸಚಿವ’ ಎಂದು ಜೋಶಿ ಆರೋಪಿಸಿದ್ದರು.<br /> <br /> ‘ಜೋಶಿಯವರು ನನ್ನ ಮೇಲೆ ವೈಯಕ್ತಿಕವಾಗಿ ಆರೋಪ ಮಾಡಲಿ. ಆದರೆ ನಾನಿರುವ ಸಾಂವಿಧಾನಿಕ ಹುದ್ದೆಯ ಬಗ್ಗೆ ಅವರು ಲಘುವಾಗಿ ಮಾತನಾಡಬಾರದು. ಬಿಜೆಪಿ ಅಧಿಕಾರಾವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಒಬ್ಬರು ಜೈಲಿಗೆ ಹೋಗಿದ್ದರಲ್ಲವೇ? ಬಿಜೆಪಿಯವ<br /> ರೆಲ್ಲರೂ ಯೋಗ್ಯರೇ?’ ಎಂದು ಜಾರ್ಜ್ ಪ್ರಶ್ನಿಸಿದರು.<br /> <br /> ಪ್ರಹ್ಲಾದ ಜೋಶಿ ಸಹೋದರನ ವಿರುದ್ಧ ಬ್ಯಾಂಕಿಗೆ ವಂಚನೆ ಮಾಡಿದ ಆರೋಪ ಇತ್ತು. ಸಿಬಿಐ ತನಿಖೆ ನಡೆಸುತ್ತಿತ್ತು. ಆದರೆ ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಆ ಪ್ರಕರಣ ಬಿದ್ದುಹೋಯಿತು ಎಂದು ಜಾರ್ಜ್ ನೆನಪಿಸಿದರು.<br /> <br /> <strong>ಜಯಚಂದ್ರ ತಿರುಗೇಟು</strong><br /> ‘ಬಳ್ಳಾರಿಯ ಸುಗ್ಗಲಮ್ಮ ದೇವಸ್ಥಾನ ಧ್ವಂಸಗೊಳಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು. ಬಿಜೆಪಿ ಸರ್ಕಾರ ಇದನ್ನು ಹಿಂಪಡೆಯಿತು. ಆದರೆ ನಾವು ಇಂಥ ಕೆಲಸ ಮಾಡಿಲ್ಲ’ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿರುಗೇಟು ನೀಡಿದರು.</p>.<p>‘ಅರಣ್ಯ ಇಲಾಖೆಯು ಗಡಿ ಗುರುತನ್ನು ಅಳಿಸಿದ ಪ್ರಕರಣ ರೆಡ್ಡಿ ಅವರ ಮೇಲಿತ್ತು. ಅದನ್ನೂ ಬಿಜೆಪಿ ಸರ್ಕಾರ ಹಿಂಪಡೆಯಿತು. ಆದರೆ ನಾವು ಹಿಂಪಡೆದಿರುವ ಬಹುತೇಕ ಪ್ರಕರಣಗಳು ರೈತರ ಮೇಲೆ, ಕನ್ನಡಪರ ಸಂಘಟನೆಗಳ ಮೇಲೆ ದಾಖಲಿಸಿದ್ದು’ ಎಂದು ವಿವರಿಸಿದರು.</p>.<p>******</p>.<p><strong><span style="color:#a52a2a;"><em>ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಬಹುದು. ಆದರೆ ಆ ತೀರ್ಮಾನ ಕೋರ್ಟ್ ಪರಿಶೀಲನೆಗೆ ಒಳಪಡುತ್ತದೆ. ಕೋರ್ಟ್ ಸಮ್ಮತಿಸಿದರೆ ಮಾತ್ರ ಪ್ರಕರಣ ರದ್ದಾಗುತ್ತದೆ.</em></span><br /> ಟಿ.ಬಿ. ಜಯಚಂದ್ರ,</strong> <em>ಕಾನೂನು ಸಚಿವ</em></p>.<p><strong><span style="color:#0000ff;">ಬಿಜೆಪಿ ಅವಧಿಯಲ್ಲಿ ‘ಖಾನ್’, ‘ಇಸ್ಮಾಯಿಲ್’ ಎಂಬ ಹೆಸರಿದ್ದವರ ಮೇಲೆ ಕೋಮುಗಲಭೆ ಪ್ರಕರಣ ದಾಖಲಿಸಲಾಗಿತ್ತು. ಆದರೆ ಎಫ್ಐಆರ್ನಲ್ಲಿ ಇವರ ವಿಳಾಸವೇ ಇರಲಿಲ್ಲ.</span><br /> ಕೆ.ಜೆ. ಜಾರ್ಜ್,</strong><em> ಗೃಹ ಸಚಿವ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನಂಥವರನ್ನು ಕಂಡರೆ ಬಿಜೆಪಿಯವರಿಗೆ ಕಣ್ಣುರಿ. ರಾಜ್ಯದ ಗೃಹ ಸಚಿವ ಅಯೋಗ್ಯ ಎಂದು ಹೇಳಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಅದೆಷ್ಟು ಧೈರ್ಯ’ ಎಂದು ಕೆ.ಜೆ. ಜಾರ್ಜ್ ಕಿಡಿಕಾರಿದರು.<br /> <br /> ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮುಗಲಭೆಗಳ ಸಂದರ್ಭದಲ್ಲಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸುವ ಮೂಲಕ ನಮ್ಮ ಸರ್ಕಾರ ಯಾವುದೇ ಸಮುದಾಯವನ್ನು ತುಷ್ಟೀಕರಿಸುವ ಯತ್ನ ನಡೆಸಿಲ್ಲ’ ಎಂದರು.<br /> ‘ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯುವುದು ರಾಜ್ಯ ಸರ್ಕಾರ ಎಸಗಿದ ರಾಷ್ಟ್ರದ್ರೋಹದ ಕೆಲಸ, ಜಾರ್ಜ್ ಅಯೋಗ್ಯ ಗೃಹ ಸಚಿವ’ ಎಂದು ಜೋಶಿ ಆರೋಪಿಸಿದ್ದರು.<br /> <br /> ‘ಜೋಶಿಯವರು ನನ್ನ ಮೇಲೆ ವೈಯಕ್ತಿಕವಾಗಿ ಆರೋಪ ಮಾಡಲಿ. ಆದರೆ ನಾನಿರುವ ಸಾಂವಿಧಾನಿಕ ಹುದ್ದೆಯ ಬಗ್ಗೆ ಅವರು ಲಘುವಾಗಿ ಮಾತನಾಡಬಾರದು. ಬಿಜೆಪಿ ಅಧಿಕಾರಾವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಒಬ್ಬರು ಜೈಲಿಗೆ ಹೋಗಿದ್ದರಲ್ಲವೇ? ಬಿಜೆಪಿಯವ<br /> ರೆಲ್ಲರೂ ಯೋಗ್ಯರೇ?’ ಎಂದು ಜಾರ್ಜ್ ಪ್ರಶ್ನಿಸಿದರು.<br /> <br /> ಪ್ರಹ್ಲಾದ ಜೋಶಿ ಸಹೋದರನ ವಿರುದ್ಧ ಬ್ಯಾಂಕಿಗೆ ವಂಚನೆ ಮಾಡಿದ ಆರೋಪ ಇತ್ತು. ಸಿಬಿಐ ತನಿಖೆ ನಡೆಸುತ್ತಿತ್ತು. ಆದರೆ ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಆ ಪ್ರಕರಣ ಬಿದ್ದುಹೋಯಿತು ಎಂದು ಜಾರ್ಜ್ ನೆನಪಿಸಿದರು.<br /> <br /> <strong>ಜಯಚಂದ್ರ ತಿರುಗೇಟು</strong><br /> ‘ಬಳ್ಳಾರಿಯ ಸುಗ್ಗಲಮ್ಮ ದೇವಸ್ಥಾನ ಧ್ವಂಸಗೊಳಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು. ಬಿಜೆಪಿ ಸರ್ಕಾರ ಇದನ್ನು ಹಿಂಪಡೆಯಿತು. ಆದರೆ ನಾವು ಇಂಥ ಕೆಲಸ ಮಾಡಿಲ್ಲ’ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿರುಗೇಟು ನೀಡಿದರು.</p>.<p>‘ಅರಣ್ಯ ಇಲಾಖೆಯು ಗಡಿ ಗುರುತನ್ನು ಅಳಿಸಿದ ಪ್ರಕರಣ ರೆಡ್ಡಿ ಅವರ ಮೇಲಿತ್ತು. ಅದನ್ನೂ ಬಿಜೆಪಿ ಸರ್ಕಾರ ಹಿಂಪಡೆಯಿತು. ಆದರೆ ನಾವು ಹಿಂಪಡೆದಿರುವ ಬಹುತೇಕ ಪ್ರಕರಣಗಳು ರೈತರ ಮೇಲೆ, ಕನ್ನಡಪರ ಸಂಘಟನೆಗಳ ಮೇಲೆ ದಾಖಲಿಸಿದ್ದು’ ಎಂದು ವಿವರಿಸಿದರು.</p>.<p>******</p>.<p><strong><span style="color:#a52a2a;"><em>ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಬಹುದು. ಆದರೆ ಆ ತೀರ್ಮಾನ ಕೋರ್ಟ್ ಪರಿಶೀಲನೆಗೆ ಒಳಪಡುತ್ತದೆ. ಕೋರ್ಟ್ ಸಮ್ಮತಿಸಿದರೆ ಮಾತ್ರ ಪ್ರಕರಣ ರದ್ದಾಗುತ್ತದೆ.</em></span><br /> ಟಿ.ಬಿ. ಜಯಚಂದ್ರ,</strong> <em>ಕಾನೂನು ಸಚಿವ</em></p>.<p><strong><span style="color:#0000ff;">ಬಿಜೆಪಿ ಅವಧಿಯಲ್ಲಿ ‘ಖಾನ್’, ‘ಇಸ್ಮಾಯಿಲ್’ ಎಂಬ ಹೆಸರಿದ್ದವರ ಮೇಲೆ ಕೋಮುಗಲಭೆ ಪ್ರಕರಣ ದಾಖಲಿಸಲಾಗಿತ್ತು. ಆದರೆ ಎಫ್ಐಆರ್ನಲ್ಲಿ ಇವರ ವಿಳಾಸವೇ ಇರಲಿಲ್ಲ.</span><br /> ಕೆ.ಜೆ. ಜಾರ್ಜ್,</strong><em> ಗೃಹ ಸಚಿವ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>