ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಸಾಹಿತ್ಯ, ಸಂಗೀತದ ಸಂಬಂಧ ಗಾಢ’

Last Updated 22 ಸೆಪ್ಟೆಂಬರ್ 2014, 19:47 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡ ಸಾಹಿತ್ಯ ಮತ್ತು ಸಂಗೀತದ ಸಂಬಂಧವು ಶತಮಾನಗಳಷ್ಟು  ಹಳೆಯದು ಮತ್ತು ಇಂದಿಗೂ ಗಾಢವಾಗಿದೆ’ ಎಂದು ವಿದ್ವಾಂಸ ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ ಹೇಳಿದರು.

ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ಮತ್ತು ಸಂಗೀತ ವಿಭಾಗವು ಕಾಲೇಜು ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ಕನ್ನಡ ಸಾಹಿತ್ಯ ಮತ್ತು ಸಂಗೀತದ ನಡುವಣ ಸಂಬಂಧ– ಹೊಸ ದೃಷ್ಟಿಕೋನ’ ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಸಾಹಿತ್ಯ ಮತ್ತು ಸಂಗೀತವು ಎರಡೂ ಮೇಳೈಸಿರುವುದರಿಂದಲೇ ಇಂದು ಎರಡೂ ಔನ್ನತ್ಯವನ್ನು ಮುಟ್ಟಿವೆ. ಸಾಹಿತ್ಯ ಮತ್ತು ಸಂಗೀತ ಎರಡೂ ಒಂದಕ್ಕೊಂದು ಬೆಸೆದುಕೊಂಡಿವೆ’ ಎಂದರು.   ನಾದ ಮಾಧುರ್ಯದ ಸುಂದರ ರಚನೆ ಕೆಲವು ವರ್ಷಗಳ ಹಿಂದೆಯೇ ಮರೆಯಾಗಿವೆ. ಮೊದಲಿನ ಸಿನಿಮಾದ ಸಂಗೀತವನ್ನು ಕೇಳಿದರೆ ಮಾಧುರ್ಯ ಆವರಿಸುತ್ತಿತ್ತು. ಆದರೆ, ಈಗ ಆರ್ಭಟಿಸುವ ಸಂಗೀತ ಮನಸ್ಸಿಗೆ ಮುದ ನೀಡುವುದಿಲ್ಲ’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT