<p><strong>ಬೆಂಗಳೂರು:</strong> ‘ನಗರದ ಕೆರೆಗಳೆಲ್ಲ ಕಾಣೆಯಾದ ಬಳಿಕ ಸರ್ಕಾರ ಅವುಗಳ ರಕ್ಷಣೆಗೆ ಸಮಿತಿ ರಚಿಸಿದೆ’ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎ.ಕೆ.ಎಂ. ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉತ್ತರಹಳ್ಳಿ ಹೋಬಳಿಯ ವೆಂಕಟರಾಯನ ಕೆರೆ ಪಾತ್ರದಲ್ಲಿ ನಿರ್ಮಿಸಿದ ಬಡಾವಣೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾಹಿತಿ ಅರ್ಜಿ ವಿಚಾರಣೆ ಕಾಲಕ್ಕೆ ಗುರುವಾರ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಬಡಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಹಶೀಲ್ದಾರರಿಂದ ಮಾಧ್ಯಮ ಪ್ರತಿನಿಧಿಯೊಬ್ಬರು ಮಾಹಿತಿ ಕೇಳಿದ್ದರು. ಅಲ್ಲಿಂದ ಯಾವುದೇ ಮಾಹಿತಿ ಸಿಗದ ಕಾರಣ ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಗೆ ಸಂಬಂಧಿಸಿದಂತೆ ಗುರುವಾರ ವಿಚಾರಣೆ ನಡೆಸಿದ ಮಾಹಿತಿ ಆಯೋಗದ ಆಯುಕ್ತರು, ‘ಕೆರೆ ಪಾತ್ರದಲ್ಲಿ ನಿವೇಶನ ನೀಡುವ ಮೂಲಕ ಜನರನ್ನು ವಂಚಿಸಲಾಗಿದೆ’ ಎಂದೂ ಬಿಡಿಎ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.<br /> <br /> ಬಿಡಿಎ ಮಂಡಳಿಯಿಂದ ಒಪ್ಪಿಗೆ ಸಿಗದಿದ್ದರೂ 2004ರಲ್ಲಿ 130 ನಿವೇಶನಗಳನ್ನು ನಿರ್ಮಿಸಿ, ಮಾರಾಟ ಮಾಡಿತ್ತು. ಆ ಪ್ರದೇಶ ಕೆರೆ ಪಾತ್ರವಾಗಿತ್ತು ಎಂದು ಹಲವರು ದೂರಿದ್ದರು. ಈ ಕುರಿತಂತೆ ಮಾಹಿತಿ ಕೇಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಗರದ ಕೆರೆಗಳೆಲ್ಲ ಕಾಣೆಯಾದ ಬಳಿಕ ಸರ್ಕಾರ ಅವುಗಳ ರಕ್ಷಣೆಗೆ ಸಮಿತಿ ರಚಿಸಿದೆ’ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎ.ಕೆ.ಎಂ. ನಾಯಕ್ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉತ್ತರಹಳ್ಳಿ ಹೋಬಳಿಯ ವೆಂಕಟರಾಯನ ಕೆರೆ ಪಾತ್ರದಲ್ಲಿ ನಿರ್ಮಿಸಿದ ಬಡಾವಣೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾಹಿತಿ ಅರ್ಜಿ ವಿಚಾರಣೆ ಕಾಲಕ್ಕೆ ಗುರುವಾರ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಬಡಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಹಶೀಲ್ದಾರರಿಂದ ಮಾಧ್ಯಮ ಪ್ರತಿನಿಧಿಯೊಬ್ಬರು ಮಾಹಿತಿ ಕೇಳಿದ್ದರು. ಅಲ್ಲಿಂದ ಯಾವುದೇ ಮಾಹಿತಿ ಸಿಗದ ಕಾರಣ ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಗೆ ಸಂಬಂಧಿಸಿದಂತೆ ಗುರುವಾರ ವಿಚಾರಣೆ ನಡೆಸಿದ ಮಾಹಿತಿ ಆಯೋಗದ ಆಯುಕ್ತರು, ‘ಕೆರೆ ಪಾತ್ರದಲ್ಲಿ ನಿವೇಶನ ನೀಡುವ ಮೂಲಕ ಜನರನ್ನು ವಂಚಿಸಲಾಗಿದೆ’ ಎಂದೂ ಬಿಡಿಎ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.<br /> <br /> ಬಿಡಿಎ ಮಂಡಳಿಯಿಂದ ಒಪ್ಪಿಗೆ ಸಿಗದಿದ್ದರೂ 2004ರಲ್ಲಿ 130 ನಿವೇಶನಗಳನ್ನು ನಿರ್ಮಿಸಿ, ಮಾರಾಟ ಮಾಡಿತ್ತು. ಆ ಪ್ರದೇಶ ಕೆರೆ ಪಾತ್ರವಾಗಿತ್ತು ಎಂದು ಹಲವರು ದೂರಿದ್ದರು. ಈ ಕುರಿತಂತೆ ಮಾಹಿತಿ ಕೇಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>