<p><strong>ಬೆಂಗಳೂರು: </strong>ಭಾರತದಲ್ಲಿ ಸಂಗ್ರಹವಾಗುವ ಘನತ್ಯಾಜ್ಯದಿಂದ ಸಾಕಷ್ಟು ಮಿಥೆನಾಲ್ ಇಂಧನವನ್ನು ಉತ್ಪಾದಿಸಬಹುದು ಎಂದು ‘ಯೂನಿವರ್ಸಿಟಿ ಆಫ್ ಸದರನ್ ಕ್ಯಾಲಿಫೋರ್ನಿಯ’ದ ರಸಾಯನಸಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಿ.ಕೆ.ಸೂರ್ಯ ಪ್ರಕಾಶ್ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ವಿಜ್ಞಾನ ವೇದಿಕೆಯು ಇತ್ತೀಚೆಗೆ ನ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ‘ಬಿಯಾಂಡ್ ಆಯಿಲ್ ಅಂಡ್ ಗ್ಯಾಸ್: ಮಿಥೆನಾಲ್ ಎಕಾನಮಿ’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಮಿಥೆನಾಲ್ ಹೆಚ್ಚಿನ ದಕ್ಷತೆಯ ನೈಸರ್ಗಿಕ ಅನಿಲ. ಹೆಚ್ಚು ಶಕ್ತಿಯನ್ನು ಉತ್ಪಾದಿಸುವ ಮಿಥೆನಾಲ್ ಕಡಿಮೆ ಪ್ರಮಾಣದ ಇಂಗಾಲದ ಡೈ ಆಕ್ಸೈಡ್ಅನ್ನು ಬಿಡುಗಡೆ ಮಾಡುತ್ತದೆ. ಭವಿಷ್ಯದ ಇಂಧನವಾಗಿ ಇದನ್ನು ಅಭಿವೃದ್ಧಿಪಡಿಸಬಹುದು’ ಎಂದರು.<br /> <br /> ‘ಮುಸುಕಿನ ಜೋಳದಿಂದ ಉತ್ತಮ ಸಾಂದ್ರತೆಯ ಮಿಥೆನಾಲ್ ಉತ್ಪಾದಿಸಬಹುದಾಗಿದೆ. ಆದರೆ ಭಾರತಂದಂತಹ ಹೆಚ್ಚಿನ ಜನಸಂಖ್ಯಾ ರಾಷ್ಟ್ರಗಳಲ್ಲಿ ಆಹಾರ ಧಾನ್ಯವನ್ನು ಇಂಧನವಾಗಿ ಬಳಸುವುದು ಉಚಿತವಲ್ಲ’ ಎಂದು ಹೇಳಿದರು.<br /> <br /> ವೇದಿಕೆ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭಾರತದಲ್ಲಿ ಸಂಗ್ರಹವಾಗುವ ಘನತ್ಯಾಜ್ಯದಿಂದ ಸಾಕಷ್ಟು ಮಿಥೆನಾಲ್ ಇಂಧನವನ್ನು ಉತ್ಪಾದಿಸಬಹುದು ಎಂದು ‘ಯೂನಿವರ್ಸಿಟಿ ಆಫ್ ಸದರನ್ ಕ್ಯಾಲಿಫೋರ್ನಿಯ’ದ ರಸಾಯನಸಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಿ.ಕೆ.ಸೂರ್ಯ ಪ್ರಕಾಶ್ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ವಿಜ್ಞಾನ ವೇದಿಕೆಯು ಇತ್ತೀಚೆಗೆ ನ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ‘ಬಿಯಾಂಡ್ ಆಯಿಲ್ ಅಂಡ್ ಗ್ಯಾಸ್: ಮಿಥೆನಾಲ್ ಎಕಾನಮಿ’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಮಿಥೆನಾಲ್ ಹೆಚ್ಚಿನ ದಕ್ಷತೆಯ ನೈಸರ್ಗಿಕ ಅನಿಲ. ಹೆಚ್ಚು ಶಕ್ತಿಯನ್ನು ಉತ್ಪಾದಿಸುವ ಮಿಥೆನಾಲ್ ಕಡಿಮೆ ಪ್ರಮಾಣದ ಇಂಗಾಲದ ಡೈ ಆಕ್ಸೈಡ್ಅನ್ನು ಬಿಡುಗಡೆ ಮಾಡುತ್ತದೆ. ಭವಿಷ್ಯದ ಇಂಧನವಾಗಿ ಇದನ್ನು ಅಭಿವೃದ್ಧಿಪಡಿಸಬಹುದು’ ಎಂದರು.<br /> <br /> ‘ಮುಸುಕಿನ ಜೋಳದಿಂದ ಉತ್ತಮ ಸಾಂದ್ರತೆಯ ಮಿಥೆನಾಲ್ ಉತ್ಪಾದಿಸಬಹುದಾಗಿದೆ. ಆದರೆ ಭಾರತಂದಂತಹ ಹೆಚ್ಚಿನ ಜನಸಂಖ್ಯಾ ರಾಷ್ಟ್ರಗಳಲ್ಲಿ ಆಹಾರ ಧಾನ್ಯವನ್ನು ಇಂಧನವಾಗಿ ಬಳಸುವುದು ಉಚಿತವಲ್ಲ’ ಎಂದು ಹೇಳಿದರು.<br /> <br /> ವೇದಿಕೆ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>