<p><strong>ಬೆಂಗಳೂರು: ‘</strong>ರಕ್ತಗತವಾಗಿ ಭಾರತೀಯರು ಮಾನವೀಯತೆಯ ಮೂರ್ತಿಗಳು. ಹೀಗಿದ್ದೂ, ವಿಶ್ವವಿದ್ಯಾಲಯ, ರಾಜಕೀಯ ಕ್ಷೇತ್ರಗಳಲ್ಲಿ ಜಾತಿ ಹಾಗೂ ಮತವೆಂಬುದು ವಿಷವರ್ತುಲವಾಗಿ ರೂಪುಗೊಂಡಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದೆ’ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಸಕ್ತ ಶೈಕ್ಷಣಿಕ ಸ್ಥಿತಿಗತಿ: ವಿದ್ಯಾರ್ಥಿ ಯುವಜನತೆಯ ಸಮಸ್ಯೆ ಪರಿಹಾರ– ಒಂದು ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ರಾಷ್ಟ್ರೀಯ ಕಾನೂನು ಶಾಲೆ ಸಂಶೋಧಕ ಡಾ.ಚಂದ್ರಶೇಖರ ಐಜೂರು, ‘ಹಿಂದುಳಿದ, ದಲಿತ ಹಾಗೂ ಮುಸ್ಲಿಂ ವಸತಿನಿಲಯಗಳಲ್ಲಿ ಈ ಜನಾಂಗದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿಯೇ ಪ್ರತ್ಯೇಕತೆ ಹುಟ್ಟುಹಾಕಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ರಕ್ತಗತವಾಗಿ ಭಾರತೀಯರು ಮಾನವೀಯತೆಯ ಮೂರ್ತಿಗಳು. ಹೀಗಿದ್ದೂ, ವಿಶ್ವವಿದ್ಯಾಲಯ, ರಾಜಕೀಯ ಕ್ಷೇತ್ರಗಳಲ್ಲಿ ಜಾತಿ ಹಾಗೂ ಮತವೆಂಬುದು ವಿಷವರ್ತುಲವಾಗಿ ರೂಪುಗೊಂಡಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದೆ’ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಸಕ್ತ ಶೈಕ್ಷಣಿಕ ಸ್ಥಿತಿಗತಿ: ವಿದ್ಯಾರ್ಥಿ ಯುವಜನತೆಯ ಸಮಸ್ಯೆ ಪರಿಹಾರ– ಒಂದು ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ರಾಷ್ಟ್ರೀಯ ಕಾನೂನು ಶಾಲೆ ಸಂಶೋಧಕ ಡಾ.ಚಂದ್ರಶೇಖರ ಐಜೂರು, ‘ಹಿಂದುಳಿದ, ದಲಿತ ಹಾಗೂ ಮುಸ್ಲಿಂ ವಸತಿನಿಲಯಗಳಲ್ಲಿ ಈ ಜನಾಂಗದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿಯೇ ಪ್ರತ್ಯೇಕತೆ ಹುಟ್ಟುಹಾಕಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>