<p>ಬೆಂಗಳೂರು: ‘ಕೃಷಿಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನ ಅಳವಡಿಕೆಯ ಸಾಧಕ– ಬಾಧಕಗಳ ಕುರಿತು ಕೃಷಿ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಚರ್ಚೆ ನಡೆಯಬೇಕು’ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.<br /> <br /> ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕೃಷಿ ಜೈವಿಕ ತಂತ್ರಜ್ಞಾನ’ ವಿಷಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ‘ಕೃಷಿ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಬಳಕೆಯ ಬಗ್ಗೆ ರೈತರು, ಸ್ವಯಂ ಸೇವಾ ಸಂಸ್ಥೆಗಳು, ವಿಜ್ಞಾನಿಗಳು ಹಾಗೂ ಈ ತಂತ್ರಜ್ಞಾನದ ಪರ ಮತ್ತು ವಿರೋಧ ವಾದವಿರುವವರು ಒಂದೇ ವೇದಿಕೆಯಲ್ಲಿ ಚರ್ಚೆ ನಡೆಸಬೇಕಾದ ಅಗತ್ಯವಿದೆ. ಆಗ ಮಾತ್ರ ಈ ತಂತ್ರಜ್ಞಾನದ ಸಾಧ್ಯತೆಗಳ ಬಗ್ಗೆ ತಿಳಿಯಲು ಸಾಧ್ಯ’ ಎಂದರು.<br /> <br /> ‘1996 ರಲ್ಲಿ ರಾಜ್ಯಕ್ಕೆ ಬಿಟಿ ಹತ್ತಿ ಬೀಜ ಕಾಲಿಟ್ಟಿತು. ಈಗ ಶೇ 95 ರಷ್ಟು ರೈತರು ಬಿಟಿ ಹತ್ತಿಯನ್ನು ಬೆಳೆಯುತ್ತಿದ್ದಾರೆ. ಬಿಟಿ ಹತ್ತಿಯ ಬಗ್ಗೆ ಕೃಷಿ ಇಲಾಖೆ ಯಾವುದೇ ಪ್ರಚಾರವನ್ನು ಕೈಗೊಂಡಿಲ್ಲ. ಬಿಟಿ ಹತ್ತಿಗೆ ಸಬ್ಸಿಡಿಯನ್ನೂ ನೀಡಿಲ್ಲ. ರೈತರಿಗೆ ಬಟಿ ಬೀಜವನ್ನು ಸಹ ನೀಡಿಲ್ಲ. ಬಿಟಿ ಹತ್ತಿ ಬೆಳೆಯುವುದು ರೈತರ ಆಯ್ಕೆಯ ಸ್ವಾತಂತ್ರ್ಯ. ಈ ವಿಚಾರದಲ್ಲಿ ಕೃಷಿ ಇಲಾಖೆ ಹೇಗೆ ಜವಾಬ್ದಾರಿಯಾಗುತ್ತದೆ’ ಎಂದು ಪ್ರಶ್ನಿಸಿದರು.<br /> <br /> ‘ಆಹಾರ ಭದ್ರತಾ ಕಾಯ್ದೆ ಜಾರಿಗೆ ಬಂದಿರುವುದರಿಂದ ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆ ಸಾಧಿಸಬೇಕಿದೆ. ಕೃಷಿ ಉತ್ಪಾದನೆ ಕಡಿಮೆಯಾದರೆ, ದೇಶದ ಆಹಾರ ವ್ಯವಸ್ಥೆಯಲ್ಲಿ ಅಸಮತೋಲನ ಉಂಟಾಗುತ್ತದೆ’ ಎಂದರು.<br /> <br /> ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಮಾತನಾಡಿ, ‘ಕೃಷಿ ಜೈವಿಕ ತಂತ್ರಜ್ಞಾನದ ಬಗ್ಗೆ ತಪ್ಪು ಮಾಹಿತಿ ನೀಡಿ ಅಪಪ್ರಚಾರ ಮಾಡಲಾಗುತ್ತಿದೆ. ರೈತರಲ್ಲಿ ತಪ್ಪು ಗ್ರಹಿಕೆ ಉಂಟು ಮಾಡಲಾಗುತ್ತಿದೆ’ ಎಂದರು.<br /> <br /> ‘ಕೃಷಿ ಜೈವಿಕ ತಂತ್ರಜ್ಞಾನದಲ್ಲಿ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ಕೃಷಿಯಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು, ರೈತರ ಆದಾಯವನ್ನು ಹೆಚ್ಚಿಸಿ ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಅಗತ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಬಿಟಿ ಹತ್ತಿಯನ್ನು ಶೇ 95 ರಷ್ಟು ರೈತರು ಸ್ವೀಕರಿಸಿ ತಮ್ಮ ಜಮೀನಿನಲ್ಲಿ ಬೆಳೆದಿದ್ದಾರೆ. ಇದರಿಂದ, ಅವರ ಆದಾಯದ ಮಟ್ಟವೂ ಹೆಚ್ಚಾಗಿದೆ, ಅವರ ಜೀವನವೂ ಸುಧಾರಿಸಿದೆ’ ಎಂದು ಹೇಳಿದರು.<br /> <br /> ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ದೀಪಕ್ ಪೆಂಟಲ್ ಮಾತನಾಡಿ, ‘ಕೆಲವು ಹೋರಾಟಗಾರರು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ವಿಜ್ಞಾನಿಗಳು ಕೃಷಿ ಜೈವಿಕ ತಂತ್ರಜ್ಞಾನದ ಕುರಿತು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಜೀವಾಂತರ ತಂತ್ರಜ್ಞಾನ ಸಮಿತಿ (ಟ್ರಾನ್ಸೆಜೆನಿಕ್ ಟೆಕ್ನಾಲಜಿ ಕಮಿಟಿ)ಯು ತಪ್ಪು ವರದಿ ನೀಡಿದೆ. ವರದಿಯಲ್ಲಿ ಕೃಷಿ ಜೈವಿಕ ತಂತ್ರಜ್ಞಾನದ ಕುರಿತು ಅನೇಕ ತಪ್ಪು ಮಾಹಿತಿಗಳನ್ನು ನೀಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೃಷಿಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನ ಅಳವಡಿಕೆಯ ಸಾಧಕ– ಬಾಧಕಗಳ ಕುರಿತು ಕೃಷಿ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಚರ್ಚೆ ನಡೆಯಬೇಕು’ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.<br /> <br /> ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕೃಷಿ ಜೈವಿಕ ತಂತ್ರಜ್ಞಾನ’ ವಿಷಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ‘ಕೃಷಿ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಬಳಕೆಯ ಬಗ್ಗೆ ರೈತರು, ಸ್ವಯಂ ಸೇವಾ ಸಂಸ್ಥೆಗಳು, ವಿಜ್ಞಾನಿಗಳು ಹಾಗೂ ಈ ತಂತ್ರಜ್ಞಾನದ ಪರ ಮತ್ತು ವಿರೋಧ ವಾದವಿರುವವರು ಒಂದೇ ವೇದಿಕೆಯಲ್ಲಿ ಚರ್ಚೆ ನಡೆಸಬೇಕಾದ ಅಗತ್ಯವಿದೆ. ಆಗ ಮಾತ್ರ ಈ ತಂತ್ರಜ್ಞಾನದ ಸಾಧ್ಯತೆಗಳ ಬಗ್ಗೆ ತಿಳಿಯಲು ಸಾಧ್ಯ’ ಎಂದರು.<br /> <br /> ‘1996 ರಲ್ಲಿ ರಾಜ್ಯಕ್ಕೆ ಬಿಟಿ ಹತ್ತಿ ಬೀಜ ಕಾಲಿಟ್ಟಿತು. ಈಗ ಶೇ 95 ರಷ್ಟು ರೈತರು ಬಿಟಿ ಹತ್ತಿಯನ್ನು ಬೆಳೆಯುತ್ತಿದ್ದಾರೆ. ಬಿಟಿ ಹತ್ತಿಯ ಬಗ್ಗೆ ಕೃಷಿ ಇಲಾಖೆ ಯಾವುದೇ ಪ್ರಚಾರವನ್ನು ಕೈಗೊಂಡಿಲ್ಲ. ಬಿಟಿ ಹತ್ತಿಗೆ ಸಬ್ಸಿಡಿಯನ್ನೂ ನೀಡಿಲ್ಲ. ರೈತರಿಗೆ ಬಟಿ ಬೀಜವನ್ನು ಸಹ ನೀಡಿಲ್ಲ. ಬಿಟಿ ಹತ್ತಿ ಬೆಳೆಯುವುದು ರೈತರ ಆಯ್ಕೆಯ ಸ್ವಾತಂತ್ರ್ಯ. ಈ ವಿಚಾರದಲ್ಲಿ ಕೃಷಿ ಇಲಾಖೆ ಹೇಗೆ ಜವಾಬ್ದಾರಿಯಾಗುತ್ತದೆ’ ಎಂದು ಪ್ರಶ್ನಿಸಿದರು.<br /> <br /> ‘ಆಹಾರ ಭದ್ರತಾ ಕಾಯ್ದೆ ಜಾರಿಗೆ ಬಂದಿರುವುದರಿಂದ ಕೃಷಿಯಲ್ಲಿ ಹೆಚ್ಚಿನ ಉತ್ಪಾದನೆ ಸಾಧಿಸಬೇಕಿದೆ. ಕೃಷಿ ಉತ್ಪಾದನೆ ಕಡಿಮೆಯಾದರೆ, ದೇಶದ ಆಹಾರ ವ್ಯವಸ್ಥೆಯಲ್ಲಿ ಅಸಮತೋಲನ ಉಂಟಾಗುತ್ತದೆ’ ಎಂದರು.<br /> <br /> ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಮಾತನಾಡಿ, ‘ಕೃಷಿ ಜೈವಿಕ ತಂತ್ರಜ್ಞಾನದ ಬಗ್ಗೆ ತಪ್ಪು ಮಾಹಿತಿ ನೀಡಿ ಅಪಪ್ರಚಾರ ಮಾಡಲಾಗುತ್ತಿದೆ. ರೈತರಲ್ಲಿ ತಪ್ಪು ಗ್ರಹಿಕೆ ಉಂಟು ಮಾಡಲಾಗುತ್ತಿದೆ’ ಎಂದರು.<br /> <br /> ‘ಕೃಷಿ ಜೈವಿಕ ತಂತ್ರಜ್ಞಾನದಲ್ಲಿ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ಕೃಷಿಯಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು, ರೈತರ ಆದಾಯವನ್ನು ಹೆಚ್ಚಿಸಿ ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಅಗತ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಬಿಟಿ ಹತ್ತಿಯನ್ನು ಶೇ 95 ರಷ್ಟು ರೈತರು ಸ್ವೀಕರಿಸಿ ತಮ್ಮ ಜಮೀನಿನಲ್ಲಿ ಬೆಳೆದಿದ್ದಾರೆ. ಇದರಿಂದ, ಅವರ ಆದಾಯದ ಮಟ್ಟವೂ ಹೆಚ್ಚಾಗಿದೆ, ಅವರ ಜೀವನವೂ ಸುಧಾರಿಸಿದೆ’ ಎಂದು ಹೇಳಿದರು.<br /> <br /> ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ದೀಪಕ್ ಪೆಂಟಲ್ ಮಾತನಾಡಿ, ‘ಕೆಲವು ಹೋರಾಟಗಾರರು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ವಿಜ್ಞಾನಿಗಳು ಕೃಷಿ ಜೈವಿಕ ತಂತ್ರಜ್ಞಾನದ ಕುರಿತು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಜೀವಾಂತರ ತಂತ್ರಜ್ಞಾನ ಸಮಿತಿ (ಟ್ರಾನ್ಸೆಜೆನಿಕ್ ಟೆಕ್ನಾಲಜಿ ಕಮಿಟಿ)ಯು ತಪ್ಪು ವರದಿ ನೀಡಿದೆ. ವರದಿಯಲ್ಲಿ ಕೃಷಿ ಜೈವಿಕ ತಂತ್ರಜ್ಞಾನದ ಕುರಿತು ಅನೇಕ ತಪ್ಪು ಮಾಹಿತಿಗಳನ್ನು ನೀಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>