<p><strong>ಬೆಂಗಳೂರು:</strong> ‘ಮಾಹಿತಿ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಇಸ್ರೊ ಉಪಗ್ರಹ ಕೇಂದ್ರದ ನಿರ್ದೇಶಕ ಡಾ.ಎಸ್.ಕೆ.ಶಿವಕುಮಾರ್ ತಿಳಿಸಿದರು.<br /> <br /> ಪಿಇಎಸ್ ವಿಶ್ವವಿದ್ಯಾಲಯವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪೈಸ್ಯಾಟ್ ಉಪಗ್ರಹ ನಿಯಂತ್ರಕ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಉಪಗ್ರಹ ಸಾಧನದ ಮೂಲಕ ಮಹತ್ತರದ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿಕೊಡಬಹುದು. ಆಧುನಿಕ ತಂತ್ರಜ್ಞಾನದ ಜತೆಯಲ್ಲಿ ಮೂಲ ವಿಜ್ಞಾನದೆಡೆಗೆ ಕುತೂಹಲವನ್ನು ಉಳಿಸಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಪ್ರಸ್ತುತ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನಾ ಕಾರ್ಯಗಳು ಜರುಗಬೇಕಿದೆ’ ಎಂದು ಹೇಳಿದರು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೊ.ಡಿ.ಜವಾಹರ್ ಮಾತನಾಡಿದರು.<br /> <br /> <strong>ಪೈಸ್ಯಾಟ್ ಉಪಗ್ರಹ ನಿಯಂತ್ರಕದ ಕಾರ್ಯವೇನು?</strong><br /> ‘ವಿಶ್ವವಿದ್ಯಾಲಯದಲ್ಲಿರುವ ಸಂಶೋಧನಾ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾನೊ ತಂತ್ರಜ್ಞಾನದಲ್ಲಿ ಪೈಸ್ಯಾಟ್ ಉಪಗ್ರಹವನ್ನು ಸಿದ್ದಪಡಿಸಲಾಗಿದೆ’ ಎಂದು ಕಾಲೇಜಿನ ಸಂಶೋಧಕ ಪ್ರವೀಣ್ ಕುಮಾರ್ ತಿಳಿಸಿದರು.</p>.<p>‘ಸುಮಾರು 6 ರಿಂದ 7 ಕೆ.ಜಿ. ತೂಗುವ ಈ ಉಪಗ್ರಹವು ಬಾಹ್ಯಾಕಾಶದಲ್ಲಿ ನಡೆಯುವ ಹಲವು ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡುತ್ತದೆ. ನಿಯಂತ್ರಕದ ಮೂಲಕ ಅವುಗಳನ್ನು ಅರಿಯಲು ಸಾಧ್ಯವಾಗುತ್ತದೆ’ ಎಂದು ಮಾಹಿತಿ ನೀಡಿದರು.<br /> <br /> ‘ಬಾಹ್ಯಾಕಾಶ ತಂತ್ರಜ್ಞಾನದ ವಿವಿಧ ಅಪ್ಲಿಕೇಷನ್ಗಳ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಇದು ನೆರವಾಗುತ್ತದೆ. ಇದರ ಮೂಲ ಉದ್ದೇಶವೇ ಸಂಶೋಧನಾ ವಿದ್ಯಾರ್ಥಿಗಳಿಗೆ ನೆರವಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಾಹಿತಿ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಇಸ್ರೊ ಉಪಗ್ರಹ ಕೇಂದ್ರದ ನಿರ್ದೇಶಕ ಡಾ.ಎಸ್.ಕೆ.ಶಿವಕುಮಾರ್ ತಿಳಿಸಿದರು.<br /> <br /> ಪಿಇಎಸ್ ವಿಶ್ವವಿದ್ಯಾಲಯವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪೈಸ್ಯಾಟ್ ಉಪಗ್ರಹ ನಿಯಂತ್ರಕ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಉಪಗ್ರಹ ಸಾಧನದ ಮೂಲಕ ಮಹತ್ತರದ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿಕೊಡಬಹುದು. ಆಧುನಿಕ ತಂತ್ರಜ್ಞಾನದ ಜತೆಯಲ್ಲಿ ಮೂಲ ವಿಜ್ಞಾನದೆಡೆಗೆ ಕುತೂಹಲವನ್ನು ಉಳಿಸಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಪ್ರಸ್ತುತ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನಾ ಕಾರ್ಯಗಳು ಜರುಗಬೇಕಿದೆ’ ಎಂದು ಹೇಳಿದರು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೊ.ಡಿ.ಜವಾಹರ್ ಮಾತನಾಡಿದರು.<br /> <br /> <strong>ಪೈಸ್ಯಾಟ್ ಉಪಗ್ರಹ ನಿಯಂತ್ರಕದ ಕಾರ್ಯವೇನು?</strong><br /> ‘ವಿಶ್ವವಿದ್ಯಾಲಯದಲ್ಲಿರುವ ಸಂಶೋಧನಾ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾನೊ ತಂತ್ರಜ್ಞಾನದಲ್ಲಿ ಪೈಸ್ಯಾಟ್ ಉಪಗ್ರಹವನ್ನು ಸಿದ್ದಪಡಿಸಲಾಗಿದೆ’ ಎಂದು ಕಾಲೇಜಿನ ಸಂಶೋಧಕ ಪ್ರವೀಣ್ ಕುಮಾರ್ ತಿಳಿಸಿದರು.</p>.<p>‘ಸುಮಾರು 6 ರಿಂದ 7 ಕೆ.ಜಿ. ತೂಗುವ ಈ ಉಪಗ್ರಹವು ಬಾಹ್ಯಾಕಾಶದಲ್ಲಿ ನಡೆಯುವ ಹಲವು ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡುತ್ತದೆ. ನಿಯಂತ್ರಕದ ಮೂಲಕ ಅವುಗಳನ್ನು ಅರಿಯಲು ಸಾಧ್ಯವಾಗುತ್ತದೆ’ ಎಂದು ಮಾಹಿತಿ ನೀಡಿದರು.<br /> <br /> ‘ಬಾಹ್ಯಾಕಾಶ ತಂತ್ರಜ್ಞಾನದ ವಿವಿಧ ಅಪ್ಲಿಕೇಷನ್ಗಳ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಇದು ನೆರವಾಗುತ್ತದೆ. ಇದರ ಮೂಲ ಉದ್ದೇಶವೇ ಸಂಶೋಧನಾ ವಿದ್ಯಾರ್ಥಿಗಳಿಗೆ ನೆರವಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>