<p><strong>ಬೆಂಗಳೂರು: </strong>‘ಬದುಕಿನಲ್ಲಿ ಪ್ರತಿಕ್ಷಣವೂ ಒಬ್ಬರ ಮೇಲೆ ಮತ್ತೊಬ್ಬರು ಹುನ್ನಾರ ಮಾಡುತ್ತಲೇ ಇರಬೇಕು ಎಂಬ ಕೆಟ್ಟ ನೀತಿ ಪಾಠವನ್ನು ಇಂದಿನ ಟಿ.ವಿ ಧಾರಾವಾಹಿಗಳು ಸಮಾಜಕ್ಕೆ ನೀಡುತ್ತಿವೆ. ಅಂಥ ಧಾರಾವಾಹಿಗಳಿಂದ ಬೇಸತ್ತ ಜನ ರಂಗಭೂಮಿಯತ್ತ ವಾಲುತ್ತಿದ್ದಾರೆ’ ಎಂದು ವಿಮರ್ಶಕ ಕೆ.ಮರುಳಸಿದ್ದಪ್ಪ ಹೇಳಿದರು.<br /> <br /> ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ದಕ್ಷಿಣ ಭಾರತ ರಂಗೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಹುನ್ನಾರದ ಧಾರಾವಾಹಿಗಳಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಆತಂಕದ ಸಂಗತಿ. 75 ವರ್ಷದ ಬದುಕಿನಲ್ಲಿ ನಾನೂ ಹುನ್ನಾರ ಮಾಡಿದ್ದೇನೆ. ನನ್ನ ವಿರುದ್ಧವೂ ಜನರು ಹುನ್ನಾರ ಮಾಡಿದ್ದಾರೆ. ಅದು ಇಂದಿನ ಧಾರಾವಾಹಿಗಳಷ್ಟಲ್ಲ’ ಎಂದು ಹೇಳಿದರು.<br /> <br /> ‘ಟಿ.ವಿ ಧಾರಾವಾಹಿಗಳು ದರಿದ್ರ ಮಟ್ಟಕ್ಕೆ ಮುಟ್ಟುತ್ತಿವೆ. ವಿಧಿಯಿಲ್ಲದೆ ಮನರಂಜನೆಗಾಗಿ ಜನರು ಅವುಗಳ ಮೊರೆಹೋಗುತ್ತಿದ್ದಾರೆ ಎಂದು ಅವರು ಹೇಳಿದರು. ಒಳ್ಳೆಯ ಮನರಂಜನೆ ಹಾಗೂ ಸಾಮಾಜಿಕ ಕಳಕಳಿ ಅಂಶವು ರಂಗಭೂಮಿಯಲ್ಲಿ ಇದೆ ಎಂದು ಮನದಟ್ಟು ಮಾಡಿಕೊಟ್ಟರೆ ರಂಗಭೂಮಿಯತ್ತ ಬರುವ ಜನರ ಸಂಖ್ಯೆ ಹೆಚ್ಚಾಗುತ್ತದೆ’ ಎಂದು ತಿಳಿಸಿದರು.<br /> <br /> ನಟಿ ಬಿ. ಜಯಶ್ರೀ ಮಾತನಾಡಿ, ‘ಇಂದು ಎಲ್ಲರ ಮನಸ್ಸು ವಿಕೃತವಾಗಿದೆ. ಹೃದಯದಲ್ಲಿ ಉಂಟಾಗಿರುವ ಗಲಭೆ ನಿವಾರಿಸಲು ರಂಗಭೂಮಿ, ರಂಗಮಂದಿರದ ಅಗತ್ಯವಾಗಿದೆ. ನಾಟಕ ವೀಕ್ಷಿಸಿದರೆ ಮನಸ್ಸು ಶಾಂತವಾಗುತ್ತದೆ’ ಎಂದು ಹೇಳಿದರು.<br /> <br /> <strong>ಮೂರು ವರ್ಷದ ರೆಪರ್ಟರಿ ಕೋರ್ಸ್:</strong> ‘ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದಲ್ಲಿ ಮೂರು ವರ್ಷದ ರೆಪರ್ಟರಿ ಕೋರ್ಸ್ ಆರಂಭಿಸಲು ಚಿಂತನೆ ನಡೆದಿದೆ’ ಎಂದು ಕೇಂದ್ರದ ನಿರ್ದೇಶಕ ಸಿ. ಬಸವಲಿಂಗಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಬದುಕಿನಲ್ಲಿ ಪ್ರತಿಕ್ಷಣವೂ ಒಬ್ಬರ ಮೇಲೆ ಮತ್ತೊಬ್ಬರು ಹುನ್ನಾರ ಮಾಡುತ್ತಲೇ ಇರಬೇಕು ಎಂಬ ಕೆಟ್ಟ ನೀತಿ ಪಾಠವನ್ನು ಇಂದಿನ ಟಿ.ವಿ ಧಾರಾವಾಹಿಗಳು ಸಮಾಜಕ್ಕೆ ನೀಡುತ್ತಿವೆ. ಅಂಥ ಧಾರಾವಾಹಿಗಳಿಂದ ಬೇಸತ್ತ ಜನ ರಂಗಭೂಮಿಯತ್ತ ವಾಲುತ್ತಿದ್ದಾರೆ’ ಎಂದು ವಿಮರ್ಶಕ ಕೆ.ಮರುಳಸಿದ್ದಪ್ಪ ಹೇಳಿದರು.<br /> <br /> ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ದಕ್ಷಿಣ ಭಾರತ ರಂಗೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಹುನ್ನಾರದ ಧಾರಾವಾಹಿಗಳಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಆತಂಕದ ಸಂಗತಿ. 75 ವರ್ಷದ ಬದುಕಿನಲ್ಲಿ ನಾನೂ ಹುನ್ನಾರ ಮಾಡಿದ್ದೇನೆ. ನನ್ನ ವಿರುದ್ಧವೂ ಜನರು ಹುನ್ನಾರ ಮಾಡಿದ್ದಾರೆ. ಅದು ಇಂದಿನ ಧಾರಾವಾಹಿಗಳಷ್ಟಲ್ಲ’ ಎಂದು ಹೇಳಿದರು.<br /> <br /> ‘ಟಿ.ವಿ ಧಾರಾವಾಹಿಗಳು ದರಿದ್ರ ಮಟ್ಟಕ್ಕೆ ಮುಟ್ಟುತ್ತಿವೆ. ವಿಧಿಯಿಲ್ಲದೆ ಮನರಂಜನೆಗಾಗಿ ಜನರು ಅವುಗಳ ಮೊರೆಹೋಗುತ್ತಿದ್ದಾರೆ ಎಂದು ಅವರು ಹೇಳಿದರು. ಒಳ್ಳೆಯ ಮನರಂಜನೆ ಹಾಗೂ ಸಾಮಾಜಿಕ ಕಳಕಳಿ ಅಂಶವು ರಂಗಭೂಮಿಯಲ್ಲಿ ಇದೆ ಎಂದು ಮನದಟ್ಟು ಮಾಡಿಕೊಟ್ಟರೆ ರಂಗಭೂಮಿಯತ್ತ ಬರುವ ಜನರ ಸಂಖ್ಯೆ ಹೆಚ್ಚಾಗುತ್ತದೆ’ ಎಂದು ತಿಳಿಸಿದರು.<br /> <br /> ನಟಿ ಬಿ. ಜಯಶ್ರೀ ಮಾತನಾಡಿ, ‘ಇಂದು ಎಲ್ಲರ ಮನಸ್ಸು ವಿಕೃತವಾಗಿದೆ. ಹೃದಯದಲ್ಲಿ ಉಂಟಾಗಿರುವ ಗಲಭೆ ನಿವಾರಿಸಲು ರಂಗಭೂಮಿ, ರಂಗಮಂದಿರದ ಅಗತ್ಯವಾಗಿದೆ. ನಾಟಕ ವೀಕ್ಷಿಸಿದರೆ ಮನಸ್ಸು ಶಾಂತವಾಗುತ್ತದೆ’ ಎಂದು ಹೇಳಿದರು.<br /> <br /> <strong>ಮೂರು ವರ್ಷದ ರೆಪರ್ಟರಿ ಕೋರ್ಸ್:</strong> ‘ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದಲ್ಲಿ ಮೂರು ವರ್ಷದ ರೆಪರ್ಟರಿ ಕೋರ್ಸ್ ಆರಂಭಿಸಲು ಚಿಂತನೆ ನಡೆದಿದೆ’ ಎಂದು ಕೇಂದ್ರದ ನಿರ್ದೇಶಕ ಸಿ. ಬಸವಲಿಂಗಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>