<p><strong>ಬೆಂಗಳೂರು</strong>: ‘ಉತ್ತಮ ಪತ್ರಕರ್ತರನ್ನು ರೂಪಿಸಲು ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳು ಹಾಗೂ ಮಾಧ್ಯಮ ಸಂಸ್ಥೆಗಳ ನಡುವೆ ಸೇತುವೆ ನಿರ್ಮಿಸುವ ಅಗತ್ಯ ಇದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಎಚ್.ಎಸ್. ಈಶ್ವರ್ ತಿಳಿಸಿದರು.<br /> <br /> ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ಭಾರತೀಯ ವಿದ್ಯಾಭವನದಲ್ಲಿ ಸೋಮವಾರ ನಡೆದ ‘ಮಾಧ್ಯಮ ವೃತ್ತಿ ತರಬೇತಿ– ಸವಾಲು ಹಾಗೂ ಸಾಧ್ಯತೆಗಳ ಚರ್ಚೆ’ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ‘ಬೋಧನೆ ಮಾಡುವ ಹಾಗೂ ತರಬೇತಿ ನೀಡುವ ವಿಷಯದಲ್ಲಿ ಉಭಯ ಸಂಸ್ಥೆಗಳ ನಡುವೆ ಒಪ್ಪಂದ ಏರ್ಪಡಬೇಕು’ ಎಂದು ಅವರು ಕಿವಿಮಾತು ಹೇಳಿದರು.<br /> <br /> ‘ಪತ್ರಿಕೋದ್ಯಮ ವಿಭಾಗಗಳಲ್ಲಿ ಈಗ ಬೋಧಿಸುತ್ತಿರುವ ಪಠ್ಯಕ್ರಮಗಳು 50 ವರ್ಷಗಳ ಹಿಂದಿನವು. ಹೀಗಾಗಿ ಪಠ್ಯಕ್ರಮದ ಬದಲಾವಣೆ ಮಾಡುವ ಅವಶ್ಯಕತೆ ಇದೆ’ ಎಂದು ಅವರು ಪ್ರತಿಪಾದಿಸಿದರು.<br /> <br /> ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಜಿ. ಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಿ, ‘ಮಾಧ್ಯಮದವರು ಎಷ್ಟರ ಮಟ್ಟಿಗೆ ಸಮಾಜವನ್ನು, ಸಾರ್ವಜನಿಕ ಅಭಿಪ್ರಾಯವನ್ನು ಬದಲಿಸಬಲ್ಲರು ಎಂಬುದು ಚರ್ಚೆಗೆ ಅರ್ಹವಾದ ವಿಷಯ. ಇಂಗ್ಲೆಂಡಿನ ‘ಇಂಡಿಪೆಂಡೆಂಟ್’ ಪತ್ರಿಕೆಯ ಮಾದರಿಯಲ್ಲೇ ನಮ್ಮ ಪತ್ರಿಕೆಗಳು ರೂಪುಗೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಉತ್ತಮ ಪತ್ರಕರ್ತರನ್ನು ರೂಪಿಸಲು ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳು ಹಾಗೂ ಮಾಧ್ಯಮ ಸಂಸ್ಥೆಗಳ ನಡುವೆ ಸೇತುವೆ ನಿರ್ಮಿಸುವ ಅಗತ್ಯ ಇದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಎಚ್.ಎಸ್. ಈಶ್ವರ್ ತಿಳಿಸಿದರು.<br /> <br /> ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ಭಾರತೀಯ ವಿದ್ಯಾಭವನದಲ್ಲಿ ಸೋಮವಾರ ನಡೆದ ‘ಮಾಧ್ಯಮ ವೃತ್ತಿ ತರಬೇತಿ– ಸವಾಲು ಹಾಗೂ ಸಾಧ್ಯತೆಗಳ ಚರ್ಚೆ’ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ‘ಬೋಧನೆ ಮಾಡುವ ಹಾಗೂ ತರಬೇತಿ ನೀಡುವ ವಿಷಯದಲ್ಲಿ ಉಭಯ ಸಂಸ್ಥೆಗಳ ನಡುವೆ ಒಪ್ಪಂದ ಏರ್ಪಡಬೇಕು’ ಎಂದು ಅವರು ಕಿವಿಮಾತು ಹೇಳಿದರು.<br /> <br /> ‘ಪತ್ರಿಕೋದ್ಯಮ ವಿಭಾಗಗಳಲ್ಲಿ ಈಗ ಬೋಧಿಸುತ್ತಿರುವ ಪಠ್ಯಕ್ರಮಗಳು 50 ವರ್ಷಗಳ ಹಿಂದಿನವು. ಹೀಗಾಗಿ ಪಠ್ಯಕ್ರಮದ ಬದಲಾವಣೆ ಮಾಡುವ ಅವಶ್ಯಕತೆ ಇದೆ’ ಎಂದು ಅವರು ಪ್ರತಿಪಾದಿಸಿದರು.<br /> <br /> ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಜಿ. ಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಿ, ‘ಮಾಧ್ಯಮದವರು ಎಷ್ಟರ ಮಟ್ಟಿಗೆ ಸಮಾಜವನ್ನು, ಸಾರ್ವಜನಿಕ ಅಭಿಪ್ರಾಯವನ್ನು ಬದಲಿಸಬಲ್ಲರು ಎಂಬುದು ಚರ್ಚೆಗೆ ಅರ್ಹವಾದ ವಿಷಯ. ಇಂಗ್ಲೆಂಡಿನ ‘ಇಂಡಿಪೆಂಡೆಂಟ್’ ಪತ್ರಿಕೆಯ ಮಾದರಿಯಲ್ಲೇ ನಮ್ಮ ಪತ್ರಿಕೆಗಳು ರೂಪುಗೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>