<p><strong>ಯಲಹಂಕ: ‘</strong>ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಋಣ ತೀರಿಸಬೇಕೆಂಬ ಮನಸ್ಸಿದ್ದು, ಈ ದಿಸೆಯಲ್ಲಿ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವುದೂ ನಮ್ಮೆಲ್ಲರ ಋಣವಾಗಿರಬೇಕು. ಇಲ್ಲದಿದ್ದರೆ ನಮ್ಮ ತಾಯಿಗೆ ದ್ರೋಹ ಬಗೆದಂತಾಗುತ್ತದೆ’ ಎಂದು ನಿರ್ದೇಶಕ ಪಿ.ಶೇಷಾದ್ರಿ ಹೇಳಿದರು.<br /> <br /> ಹೆಬ್ಬಾಳ ಕೆಂಪಾಪುರದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ಪ್ರತಿಭಾನ ಕನ್ನಡ ಸಂಘದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಮ್ಮ ಬದುಕಿನಲ್ಲಿ ಎದುರಾಗುವ ಅವಮಾನ ಮತ್ತು ಕಷ್ಟಗಳನ್ನು ಸ್ವಾಗತಿಸಿದರೆ, ಭವಿಷ್ಯದಲ್ಲಿ ಅವು ಒಬ್ಬ ಮನುಷ್ಯನನ್ನು ಗಟ್ಟಿಗೊಳಿಸುತ್ತಾ ಹೋಗುತ್ತವೆ’ ಎಂದು ಸಲಹೆ ನೀಡಿದರು.<br /> <br /> ಚಿಂತನೆ ಮತ್ತು ಪ್ರಶ್ನೆಮಾಡುವ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಬೇರೆಬೇರೆ ಸಾಧ್ಯತೆಗಳು ಹಾಗೂ ಮಗ್ಗುಲುಗಳ ಬಗ್ಗೆ ಹೊಳೆಯುತ್ತಾ ಹೋಗುತ್ತದೆ. ವಿದ್ಯಾರ್ಥಿಗಳು ಅಂತಹ ಗುಣಗಳನ್ನು ರೂಪಿಸಿಕೊಳ್ಳ ಬೇಕು ಎಂದರು. ಕವಿಗೋಷ್ಠಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: ‘</strong>ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಋಣ ತೀರಿಸಬೇಕೆಂಬ ಮನಸ್ಸಿದ್ದು, ಈ ದಿಸೆಯಲ್ಲಿ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವುದೂ ನಮ್ಮೆಲ್ಲರ ಋಣವಾಗಿರಬೇಕು. ಇಲ್ಲದಿದ್ದರೆ ನಮ್ಮ ತಾಯಿಗೆ ದ್ರೋಹ ಬಗೆದಂತಾಗುತ್ತದೆ’ ಎಂದು ನಿರ್ದೇಶಕ ಪಿ.ಶೇಷಾದ್ರಿ ಹೇಳಿದರು.<br /> <br /> ಹೆಬ್ಬಾಳ ಕೆಂಪಾಪುರದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ಪ್ರತಿಭಾನ ಕನ್ನಡ ಸಂಘದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಮ್ಮ ಬದುಕಿನಲ್ಲಿ ಎದುರಾಗುವ ಅವಮಾನ ಮತ್ತು ಕಷ್ಟಗಳನ್ನು ಸ್ವಾಗತಿಸಿದರೆ, ಭವಿಷ್ಯದಲ್ಲಿ ಅವು ಒಬ್ಬ ಮನುಷ್ಯನನ್ನು ಗಟ್ಟಿಗೊಳಿಸುತ್ತಾ ಹೋಗುತ್ತವೆ’ ಎಂದು ಸಲಹೆ ನೀಡಿದರು.<br /> <br /> ಚಿಂತನೆ ಮತ್ತು ಪ್ರಶ್ನೆಮಾಡುವ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಬೇರೆಬೇರೆ ಸಾಧ್ಯತೆಗಳು ಹಾಗೂ ಮಗ್ಗುಲುಗಳ ಬಗ್ಗೆ ಹೊಳೆಯುತ್ತಾ ಹೋಗುತ್ತದೆ. ವಿದ್ಯಾರ್ಥಿಗಳು ಅಂತಹ ಗುಣಗಳನ್ನು ರೂಪಿಸಿಕೊಳ್ಳ ಬೇಕು ಎಂದರು. ಕವಿಗೋಷ್ಠಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>