ಆನೇಕಲ್: ಬಹುರಾಷ್ಟ್ರೀಯ ಕಂಪೆನಿಗಳ ಕೈಗೊಂಬೆಯಾಗಿರುವ ನರೇಂದ್ರ ಮೋದಿ ಅವರಿಂದ ದೇಶದ ಅಭಿವೃದ್ದಿ ಸಾಧ್ಯವಿಲ್ಲ ಎಂದು ರಾಜ್ಯಸಭಾ ಸದಸ್ಯ ಎಸ್.ಎಂ.ಕೃಷ್ಣ ಹೇಳಿದರು.
ಅವರು ತಾಲ್ಲೂಕಿನ ದೊಮ್ಮಸಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಏರ್ಪಡಿಸಿದ್ದ ಬೃಹತ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಬಹುರಾಷ್ಟ್ರೀಯ ಕಂಪೆನಿಗಳು ತಮ್ಮ ಲಾಭಕ್ಕಾಗಿ ಮೋದಿ ಪರ ಪ್ರಚಾರ ಆರಂಭಿಸಿವೆ. ಅಮೆರಿಕದ ಕಂಪನಿಗಳು ಪ್ರಚಾರಕ್ಕಾಗಿ ಕೋಟ್ಯಂತರ ರೂಪಾಯಿ ಪ್ಯಾಕೆಜ್ ಘೋಷಿಸಿವೆ. ನಮಗೆ ವಿದೇಶಿ ಪ್ಯಾಕೇಜ್ ಅವಶ್ಯಕತೆಯಿಲ್ಲ. ಸ್ವದೇಶಿ ಪ್ಯಾಕೇಜ್ ಮೂಲಕವೇ ನಮ್ಮ ಸಾಧನೆಗಳನ್ನು ಪ್ರಚಾರ ಮಾಡಿ ಮತಯಾಚನೆ ಮಾಡಲಾಗುವುದು ಎಂದರು.