<p><strong>ಬೆಂಗಳೂರು: </strong>ಲೇಖಕ ಡಾ.ಕೆ.ಎಸ್.ನಾರಾಯಣಾಚಾರ್ಯ ಅವರು ರಚಿಸಿರುವ ‘ವಾಲ್ಮೀಕಿ ಯಾರು?’ ಕೃತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿದ್ದರೂ ಮಾರಾಟ ಮಾಡುತ್ತಿದ್ದ ಗಾಂಧಿನಗರದ ಸಪ್ನ ಬುಕ್ ಹೌಸ್ ಮಳಿಗೆ ಮೇಲೆ ಉಪ್ಪಾರಪೇಟೆ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ 45 ಪುಸ್ತಕಗಳನ್ನು ಜಪ್ತಿ ಮಾಡಿದ್ದಾರೆ.<br /> <br /> ಈ ಸಂಬಂಧ ತುಮಕೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಸುರೇಶ್ ಎಂಬುವರು ಸಂಜೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಉಪ್ಪಾರಪೇಟೆ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಸಂಜೆ 6.40ರ ಸುಮಾರಿಗೆ ದಾಳಿ ನಡೆಸಿತು.<br /> <br /> ವಾಲ್ಮೀಕಿ ಬೇಡ ಅಲ್ಲ ಬ್ರಾಹ್ಮಣ. ಆದರೆ, ಬೇಡರ ಜಾತಿಯಲ್ಲಿ ಬೆಳೆದಿದ್ದ. ಅವನು ಬ್ರಾಹ್ಮಣ ಜಾತಿಯವನಾಗಿದ್ದುದರಿಂದ ರಾಮಾಯಣದಂತಹ ಕೃತಿ ರಚಿಸಲು ಸಾಧ್ಯವಾಗಿತ್ತು ಎಂದು ಲೇಖಕರು ಆ ಕೃತಿಯಲ್ಲಿ ಬರೆದಿದ್ದಾರೆ.<br /> <br /> ಕೃತಿಯಿಂದ ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ದೂರಿ ಎಂದು ವಾಲ್ಮೀಕಿ ಸಮುದಾಯದವರು ಪ್ರತಿಭಟನೆ ನಡೆಸಿದ್ದರಿಂದ ಸರ್ಕಾರ ಆ ಕೃತಿಯನ್ನು ಮುಟ್ಟುಗೋಲು ಹಾಕಿತ್ತು.<br /> <br /> ‘ಆ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿರುವ ಬಗ್ಗೆ ಮಾಹಿತಿ ಇರಲಿಲ್ಲ’ ಎಂದು ಮಳಿಗೆಯ ಮಾಲೀಕರು ಹೇಳಿದ್ದಾರೆ. ಕೃತಿಯ ಲೇಖಕರನ್ನು ಸಂಪರ್ಕಿಸಿ ಅವರನ್ನೂ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೇಖಕ ಡಾ.ಕೆ.ಎಸ್.ನಾರಾಯಣಾಚಾರ್ಯ ಅವರು ರಚಿಸಿರುವ ‘ವಾಲ್ಮೀಕಿ ಯಾರು?’ ಕೃತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿದ್ದರೂ ಮಾರಾಟ ಮಾಡುತ್ತಿದ್ದ ಗಾಂಧಿನಗರದ ಸಪ್ನ ಬುಕ್ ಹೌಸ್ ಮಳಿಗೆ ಮೇಲೆ ಉಪ್ಪಾರಪೇಟೆ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ 45 ಪುಸ್ತಕಗಳನ್ನು ಜಪ್ತಿ ಮಾಡಿದ್ದಾರೆ.<br /> <br /> ಈ ಸಂಬಂಧ ತುಮಕೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಸುರೇಶ್ ಎಂಬುವರು ಸಂಜೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಉಪ್ಪಾರಪೇಟೆ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಸಂಜೆ 6.40ರ ಸುಮಾರಿಗೆ ದಾಳಿ ನಡೆಸಿತು.<br /> <br /> ವಾಲ್ಮೀಕಿ ಬೇಡ ಅಲ್ಲ ಬ್ರಾಹ್ಮಣ. ಆದರೆ, ಬೇಡರ ಜಾತಿಯಲ್ಲಿ ಬೆಳೆದಿದ್ದ. ಅವನು ಬ್ರಾಹ್ಮಣ ಜಾತಿಯವನಾಗಿದ್ದುದರಿಂದ ರಾಮಾಯಣದಂತಹ ಕೃತಿ ರಚಿಸಲು ಸಾಧ್ಯವಾಗಿತ್ತು ಎಂದು ಲೇಖಕರು ಆ ಕೃತಿಯಲ್ಲಿ ಬರೆದಿದ್ದಾರೆ.<br /> <br /> ಕೃತಿಯಿಂದ ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ದೂರಿ ಎಂದು ವಾಲ್ಮೀಕಿ ಸಮುದಾಯದವರು ಪ್ರತಿಭಟನೆ ನಡೆಸಿದ್ದರಿಂದ ಸರ್ಕಾರ ಆ ಕೃತಿಯನ್ನು ಮುಟ್ಟುಗೋಲು ಹಾಕಿತ್ತು.<br /> <br /> ‘ಆ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿರುವ ಬಗ್ಗೆ ಮಾಹಿತಿ ಇರಲಿಲ್ಲ’ ಎಂದು ಮಳಿಗೆಯ ಮಾಲೀಕರು ಹೇಳಿದ್ದಾರೆ. ಕೃತಿಯ ಲೇಖಕರನ್ನು ಸಂಪರ್ಕಿಸಿ ಅವರನ್ನೂ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>