<p>ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯವು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ನವಕರ್ನಾಟಕ ಪಬ್ಲಿಕೇಷನ್ಸ್ ಸಹಯೋಗದಲ್ಲಿ ಆರೋಗ್ಯ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪುಸ್ತಕ ಮೇಳ ಆಯೋಜಿಸಿತ್ತು.<br /> <br /> ವಾಣಿವಿಲಾಸ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಆಶಾ ಬೆನಕಪ್ಪ ಅವರು ಪುಸ್ತಕ ಮೇಳಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಡಾ. ಆಶಾ ಬೆನಕಪ್ಪ ಅವರು, ‘ಬದಲಾದ ಜೀವನ ಶೈಲಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಕಾಯಿಲೆಗಳು ಜನರನ್ನು ಕಾಡುತ್ತಿವೆ’ ಎಂದರು.<br /> <br /> ಮುಂದುವರೆದು ಮಾತನಾಡಿದ ಅವರು, ‘ಹೀಗಿರುವಾಗ ಜನರು ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಆರೋಗ್ಯ ವಿಜ್ಞಾನ ಪುಸ್ತಕಗಳು ಸಹಕಾರಿಯಾಗಲಿವೆ’ ಎಂದು ಹೇಳಿದರು.<br /> <br /> ‘ಆರೋಗ್ಯ ವಿಜ್ಞಾನ ಪುಸ್ತಕಗಳಲ್ಲಿ ಕಾಯಿಲೆಗೆ ಕಾರಣ, ತೆಗೆದು ಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಮಗ್ರ ಮಾಹಿತಿ ಇರುತ್ತದೆ. ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.<br /> <br /> ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ವಸುಂಧರಾ ಭೂಪತಿ ಮಾತನಾಡಿ, ‘ಆಹಾರ ಸುರಕ್ಷತೆ ತೋಟದಿಂದ ತಾಟಿನವರೆಗೆ’ ಇದು ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷ ವಾಕ್ಯವಾಗಿದೆ. ಅದಕ್ಕೆ ಪೂರಕವಾಗಿ ಆಯೋಜಿಸಿರುವ ಈ ಮೇಳದಿಂದ ಆಹಾರ ಪದ್ಧತಿ, ಯಾವ ಋತುವಿನಲ್ಲಿ ಯಾವ ಬಗೆಯ ಆಹಾರ ಸೇವಿಸಬೇಕು ಎಂಬ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಳ್ಳಬಹುದಾಗಿದೆ’ ಎಂದು ಹೇಳಿದರು.<br /> <br /> ‘ಆರೋಗ್ಯ ಸಾಹಿತ್ಯದ ಮುಖಾಂತರ ಆರೋಗ್ಯ ರಕ್ಷಣೆ ಹೇಗೆ ಮಾಡಬಹುದು ಎಂಬುದನ್ನು ತಿಳಿಸಿಕೊಡುವ ಉದ್ದೇಶ ದಿಂದ ಈ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದರು.<br /> <br /> ‘ಕಾಯಿಲೆಯ ಮೂಲ, ಗುಣಲಕ್ಷಣ, ಔಷಧ ಬಳಕೆ ಸೇರಿದಂತೆ ನಾನಾ ಮಾಹಿತಿಗಳನ್ನೊಳಗೊಂಡ ಎರಡು ಸಾವಿರಕ್ಕೂ ಹೆಚ್ಚು ಪುಸ್ತಕಗಳು ಈ ಮೇಳದಲ್ಲಿ ಲಭ್ಯವಿದೆ’ ಎಂದು ವಸುಂಧರಾ ಭೂಪತಿ ಅವರು ಮಾಹಿತಿ ನೀಡಿದರು.<br /> <br /> ‘ಮುಂದಿನ ವಾರ ಕೆಂಪೇಗೌಡ (ಕಿಮ್ಸ್) ಆಸ್ಪತ್ರೆ ಹಾಗೂ ನಂತರದಲ್ಲಿ ಕೆ.ಸಿ. ಜನರಲ್ ಆಸ್ಪತ್ರೆಗಳಲ್ಲಿ ಇದೇ ರೀತಿಯ ಪುಸ್ತಕ ಮೇಳ ನಡೆಯಲಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯವು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ನವಕರ್ನಾಟಕ ಪಬ್ಲಿಕೇಷನ್ಸ್ ಸಹಯೋಗದಲ್ಲಿ ಆರೋಗ್ಯ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪುಸ್ತಕ ಮೇಳ ಆಯೋಜಿಸಿತ್ತು.<br /> <br /> ವಾಣಿವಿಲಾಸ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಆಶಾ ಬೆನಕಪ್ಪ ಅವರು ಪುಸ್ತಕ ಮೇಳಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಡಾ. ಆಶಾ ಬೆನಕಪ್ಪ ಅವರು, ‘ಬದಲಾದ ಜೀವನ ಶೈಲಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಕಾಯಿಲೆಗಳು ಜನರನ್ನು ಕಾಡುತ್ತಿವೆ’ ಎಂದರು.<br /> <br /> ಮುಂದುವರೆದು ಮಾತನಾಡಿದ ಅವರು, ‘ಹೀಗಿರುವಾಗ ಜನರು ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಆರೋಗ್ಯ ವಿಜ್ಞಾನ ಪುಸ್ತಕಗಳು ಸಹಕಾರಿಯಾಗಲಿವೆ’ ಎಂದು ಹೇಳಿದರು.<br /> <br /> ‘ಆರೋಗ್ಯ ವಿಜ್ಞಾನ ಪುಸ್ತಕಗಳಲ್ಲಿ ಕಾಯಿಲೆಗೆ ಕಾರಣ, ತೆಗೆದು ಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಮಗ್ರ ಮಾಹಿತಿ ಇರುತ್ತದೆ. ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.<br /> <br /> ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ವಸುಂಧರಾ ಭೂಪತಿ ಮಾತನಾಡಿ, ‘ಆಹಾರ ಸುರಕ್ಷತೆ ತೋಟದಿಂದ ತಾಟಿನವರೆಗೆ’ ಇದು ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷ ವಾಕ್ಯವಾಗಿದೆ. ಅದಕ್ಕೆ ಪೂರಕವಾಗಿ ಆಯೋಜಿಸಿರುವ ಈ ಮೇಳದಿಂದ ಆಹಾರ ಪದ್ಧತಿ, ಯಾವ ಋತುವಿನಲ್ಲಿ ಯಾವ ಬಗೆಯ ಆಹಾರ ಸೇವಿಸಬೇಕು ಎಂಬ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಳ್ಳಬಹುದಾಗಿದೆ’ ಎಂದು ಹೇಳಿದರು.<br /> <br /> ‘ಆರೋಗ್ಯ ಸಾಹಿತ್ಯದ ಮುಖಾಂತರ ಆರೋಗ್ಯ ರಕ್ಷಣೆ ಹೇಗೆ ಮಾಡಬಹುದು ಎಂಬುದನ್ನು ತಿಳಿಸಿಕೊಡುವ ಉದ್ದೇಶ ದಿಂದ ಈ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದರು.<br /> <br /> ‘ಕಾಯಿಲೆಯ ಮೂಲ, ಗುಣಲಕ್ಷಣ, ಔಷಧ ಬಳಕೆ ಸೇರಿದಂತೆ ನಾನಾ ಮಾಹಿತಿಗಳನ್ನೊಳಗೊಂಡ ಎರಡು ಸಾವಿರಕ್ಕೂ ಹೆಚ್ಚು ಪುಸ್ತಕಗಳು ಈ ಮೇಳದಲ್ಲಿ ಲಭ್ಯವಿದೆ’ ಎಂದು ವಸುಂಧರಾ ಭೂಪತಿ ಅವರು ಮಾಹಿತಿ ನೀಡಿದರು.<br /> <br /> ‘ಮುಂದಿನ ವಾರ ಕೆಂಪೇಗೌಡ (ಕಿಮ್ಸ್) ಆಸ್ಪತ್ರೆ ಹಾಗೂ ನಂತರದಲ್ಲಿ ಕೆ.ಸಿ. ಜನರಲ್ ಆಸ್ಪತ್ರೆಗಳಲ್ಲಿ ಇದೇ ರೀತಿಯ ಪುಸ್ತಕ ಮೇಳ ನಡೆಯಲಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>