<p><strong>ಬೆಂಗಳೂರು:</strong> ‘ಈ ಬಾರಿಯ ಕೇಂದ್ರದ ಬಜೆಟ್ ಸಾಕಷ್ಟು ಬದಲಾವಣೆಗಳಿಲ್ಲದ ಮತ್ತು ಹೊಸ ಯೋಜನೆಗಳಿಲ್ಲದ ಸಮತೋಲನದ ಬಜೆಟ್ ಆಗಿದೆ’ ಎಂದು ನ್ಯಾಷನಲ್ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್.ಆರ್.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ಸಾಮಾಜಿಕ ವಿಜ್ಞಾನ ವೇದಿಕೆಯು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೇಂದ್ರ ಬಜೆಟ್–2014’ ಕುರಿತು ಉಪನ್ಯಾಸ ನೀಡಿದರು.<br /> <br /> ‘ಚುನಾವಣೆಯ ದೃಷ್ಟಿಯಿಂದ ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಸಮತೋಲನವನ್ನು ಕಾಪಾಡಿಕೊಂಡಿದ್ದಾರೆ. ಮಧ್ಯಮವರ್ಗದವರನ್ನು ದೃಷ್ಟಿಯಲ್ಲಿರಿಸಿ ನೀಡಿದ ಬಜೆಟ್ ಇದಾಗಿದೆ’ ಎಂದರು.<br /> <br /> ‘ನೇರ ತೆರಿಗೆಯ ಸಂಗ್ರಹದಲ್ಲಿ ಏನೂ ಬದಲಾವಣೆಯಿಲ್ಲ. ಆದರೆ, ಮನೆಯನ್ನು ಹೊಸದಾಗಿ ಖರೀದಿಸುವವರಿಗೆ ಮತ್ತು ಕಟ್ಟುವವರಿಗೆ ಈ ಬಾರಿಯ ಬಜೆಟ್ನಲ್ಲಿ ಯಾವುದೇ ರೀತಿಯ ರಿಯಾಯಿತಿಗಳನ್ನು ನೀಡಿಲ್ಲ. ನೌಕರರ ಭವಿಷ್ಯ ನಿಧಿಯ ಮೇಲೂ ತೆರಿಗೆಯನ್ನು ವಿಧಿಸಲಾಗಿದೆ’ ಎಂದರು.<br /> <br /> ‘ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಮನೆ ಬಳಕೆಯ ಸಾಮಾನುಗಳ ಮೇಲೆ ಹೆಚ್ಚಿನ ರಿಯಾಯಿತಿ ನೀಡಿದ್ದಾರೆ. ಲ್ಯಾಪ್ಟಾಪ್, ಬೈಕ್, ಕಾರು, ವಾಷಿಂಗ್ ಮೆಷಿನ್ ಇವುಗಳನ್ನು ಖರೀದಿಸುವವರು ಜೂನ್ ತಿಂಗಳ ಒಳಗೆ ಖರೀದಿಸಬೇಕಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಈ ಬಾರಿಯ ಕೇಂದ್ರದ ಬಜೆಟ್ ಸಾಕಷ್ಟು ಬದಲಾವಣೆಗಳಿಲ್ಲದ ಮತ್ತು ಹೊಸ ಯೋಜನೆಗಳಿಲ್ಲದ ಸಮತೋಲನದ ಬಜೆಟ್ ಆಗಿದೆ’ ಎಂದು ನ್ಯಾಷನಲ್ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್.ಆರ್.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ಸಾಮಾಜಿಕ ವಿಜ್ಞಾನ ವೇದಿಕೆಯು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೇಂದ್ರ ಬಜೆಟ್–2014’ ಕುರಿತು ಉಪನ್ಯಾಸ ನೀಡಿದರು.<br /> <br /> ‘ಚುನಾವಣೆಯ ದೃಷ್ಟಿಯಿಂದ ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಸಮತೋಲನವನ್ನು ಕಾಪಾಡಿಕೊಂಡಿದ್ದಾರೆ. ಮಧ್ಯಮವರ್ಗದವರನ್ನು ದೃಷ್ಟಿಯಲ್ಲಿರಿಸಿ ನೀಡಿದ ಬಜೆಟ್ ಇದಾಗಿದೆ’ ಎಂದರು.<br /> <br /> ‘ನೇರ ತೆರಿಗೆಯ ಸಂಗ್ರಹದಲ್ಲಿ ಏನೂ ಬದಲಾವಣೆಯಿಲ್ಲ. ಆದರೆ, ಮನೆಯನ್ನು ಹೊಸದಾಗಿ ಖರೀದಿಸುವವರಿಗೆ ಮತ್ತು ಕಟ್ಟುವವರಿಗೆ ಈ ಬಾರಿಯ ಬಜೆಟ್ನಲ್ಲಿ ಯಾವುದೇ ರೀತಿಯ ರಿಯಾಯಿತಿಗಳನ್ನು ನೀಡಿಲ್ಲ. ನೌಕರರ ಭವಿಷ್ಯ ನಿಧಿಯ ಮೇಲೂ ತೆರಿಗೆಯನ್ನು ವಿಧಿಸಲಾಗಿದೆ’ ಎಂದರು.<br /> <br /> ‘ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಮನೆ ಬಳಕೆಯ ಸಾಮಾನುಗಳ ಮೇಲೆ ಹೆಚ್ಚಿನ ರಿಯಾಯಿತಿ ನೀಡಿದ್ದಾರೆ. ಲ್ಯಾಪ್ಟಾಪ್, ಬೈಕ್, ಕಾರು, ವಾಷಿಂಗ್ ಮೆಷಿನ್ ಇವುಗಳನ್ನು ಖರೀದಿಸುವವರು ಜೂನ್ ತಿಂಗಳ ಒಳಗೆ ಖರೀದಿಸಬೇಕಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>