<p>ಯಲಹಂಕ: ‘ವ್ಯಾಪಾರ ಹಾಗೂ ಸಾಮಾಜಿಕ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಯುವಜನಾಂಗದ ಕೊರತೆಯಿದ್ದು, ಇದನ್ನು ನೀಗಿಸಲು ನಿರ್ವಹಣಾ ಶಿಕ್ಷಣ ಸಂಸ್ಥೆಗಳು ಸೇತುವೆಯ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.<br /> <br /> ಹೆಬ್ಬಾಳ ಕೆಂಪಾಪುರದ ಸಿಂಧಿ ಕಾಲೆೇಜಿನ 20ನೇ ವರ್ಷದ ಸಂಭ್ರಮಾ ಚರಣೆ ಮತ್ತು ನೂತನ ನಿರ್ವಹಣಾ ಶಿಕ್ಷಣ ಘಟಕ ಹಾಗೂ ಒಳಾಂಗಣ ಕ್ರೀಡಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಶಿಕ್ಷಣದಲ್ಲಿ ನೀಡುತ್ತಿರುವ ಸಾಮಾನ್ಯ ಪದವಿಗಳ ಜೊತೆಗೆ ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸಲು ನಿರ್ವಹಣಾ ಶಿಕ್ಷಣ ವಿಭಾಗಗಳು ಸಹಕಾರಿ ಯಾಗಲಿವೆ’ ಎಂದು ಅವರು ಹೇಳಿದರು.<br /> ಅಂತರಕಾಲೇಜು ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.<br /> <br /> ಅಂತರರಾಷ್ಟ್ರೀಯ ಟೇಕ್ವಾಂಡೊ ಕ್ರೀಡೆಯ ತರಬೇತುದಾರ ಜೈ ಕುಮಾರ್ ಕಣ್ಣನ್, ಶೋಷಣೆ ವಿರೋಧಿ ಕಾರ್ಯಪಡೆಯ ಮಹಾನಿರ್ದೇಶಕ ಅನುಪಮ್ ದೇವ್, ಗಾಯಕಿ ವಾಣಿ ಹರಿಕೃಷ್ಣ, ಪ್ರಾಂಶುಪಾಲ ಡಾ.ಪ್ರಕಾಶ್ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: ‘ವ್ಯಾಪಾರ ಹಾಗೂ ಸಾಮಾಜಿಕ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಯುವಜನಾಂಗದ ಕೊರತೆಯಿದ್ದು, ಇದನ್ನು ನೀಗಿಸಲು ನಿರ್ವಹಣಾ ಶಿಕ್ಷಣ ಸಂಸ್ಥೆಗಳು ಸೇತುವೆಯ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.<br /> <br /> ಹೆಬ್ಬಾಳ ಕೆಂಪಾಪುರದ ಸಿಂಧಿ ಕಾಲೆೇಜಿನ 20ನೇ ವರ್ಷದ ಸಂಭ್ರಮಾ ಚರಣೆ ಮತ್ತು ನೂತನ ನಿರ್ವಹಣಾ ಶಿಕ್ಷಣ ಘಟಕ ಹಾಗೂ ಒಳಾಂಗಣ ಕ್ರೀಡಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ಶಿಕ್ಷಣದಲ್ಲಿ ನೀಡುತ್ತಿರುವ ಸಾಮಾನ್ಯ ಪದವಿಗಳ ಜೊತೆಗೆ ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸಲು ನಿರ್ವಹಣಾ ಶಿಕ್ಷಣ ವಿಭಾಗಗಳು ಸಹಕಾರಿ ಯಾಗಲಿವೆ’ ಎಂದು ಅವರು ಹೇಳಿದರು.<br /> ಅಂತರಕಾಲೇಜು ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.<br /> <br /> ಅಂತರರಾಷ್ಟ್ರೀಯ ಟೇಕ್ವಾಂಡೊ ಕ್ರೀಡೆಯ ತರಬೇತುದಾರ ಜೈ ಕುಮಾರ್ ಕಣ್ಣನ್, ಶೋಷಣೆ ವಿರೋಧಿ ಕಾರ್ಯಪಡೆಯ ಮಹಾನಿರ್ದೇಶಕ ಅನುಪಮ್ ದೇವ್, ಗಾಯಕಿ ವಾಣಿ ಹರಿಕೃಷ್ಣ, ಪ್ರಾಂಶುಪಾಲ ಡಾ.ಪ್ರಕಾಶ್ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>