<p><strong>ಬೆಂಗಳೂರು:</strong> ‘ಅಣಕು ನ್ಯಾಯಾಲಯ-ದಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ’ ಎಂದು ಹಿರಿಯ ವಕೀಲ ಡಾ.ಬಿ.ವಿ. ಆಚಾರ್ಯ ಅಭಿಪ್ರಾಯಪಟ್ಟರು.<br /> <br /> ಬಿಎಂಎಸ್ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಅಂಗವಾಗಿ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಬಿ.ಎಂ.ಶ್ರೀನಿವಾಸಯ್ಯ ಸ್ಮಾರಕ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ನಾವು ವಿದ್ಯಾರ್ಥಿಗಳಾಗಿದ್ದಾಗ ಇಂತಹ ಪ್ರಾಯೋಗಿಕ ಕಾರ್ಯಕ್ರಮಗಳು ಹೆಚ್ಚು ನಡೆಯುತ್ತಿರಲಿಲ್ಲ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಆತ್ಮವಿಶ್ವಾಸ ಹೆಚ್ಚುತ್ತದೆ. ಪ್ರತಿಭೆಯನ್ನು ಹೊರಹಾಕಲು ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ’ ಎಂದು ಹೇಳಿದರು.<br /> <br /> ಎಲ್ಲ ವಿಷಯಗಳಲ್ಲಿಯೂ ಜ್ಞಾನ ಹೊಂದಿದಾಗ ಮಾತ್ರ ವಕೀಲಿ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಮಾಡಬೇಕು. ಆಗ ಮಾತ್ರ ವೃತ್ತಿಗೆ ನ್ಯಾಯ ಸಲ್ಲಿಸಬಹುದು ಎಂದರು.<br /> <br /> ಕಾಲೇಜಿನ ಪ್ರಾಂಶುಪಾಲ ಪ್ರೊ.ಆರ್.ಹರೀಶ್ ಮಾತನಾಡಿ, ಅಣಕು ನ್ಯಾಯಾಲಯದಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಭವವನ್ನು ನೀಡುತ್ತವೆ. ವಿವಿಧ ರಾಜ್ಯಗಳಿಂದ 21 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಎಂದರು.<br /> <br /> ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಮತ್ತು ತಿರುವನಂತಪುರದ ಕೇರಳ ಲಾ ಅಕಾಡೆಮಿಯ ಕಾಲೇಜಿನ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಣಕು ನ್ಯಾಯಾಲಯ-ದಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ’ ಎಂದು ಹಿರಿಯ ವಕೀಲ ಡಾ.ಬಿ.ವಿ. ಆಚಾರ್ಯ ಅಭಿಪ್ರಾಯಪಟ್ಟರು.<br /> <br /> ಬಿಎಂಎಸ್ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಅಂಗವಾಗಿ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಬಿ.ಎಂ.ಶ್ರೀನಿವಾಸಯ್ಯ ಸ್ಮಾರಕ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ನಾವು ವಿದ್ಯಾರ್ಥಿಗಳಾಗಿದ್ದಾಗ ಇಂತಹ ಪ್ರಾಯೋಗಿಕ ಕಾರ್ಯಕ್ರಮಗಳು ಹೆಚ್ಚು ನಡೆಯುತ್ತಿರಲಿಲ್ಲ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಆತ್ಮವಿಶ್ವಾಸ ಹೆಚ್ಚುತ್ತದೆ. ಪ್ರತಿಭೆಯನ್ನು ಹೊರಹಾಕಲು ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ’ ಎಂದು ಹೇಳಿದರು.<br /> <br /> ಎಲ್ಲ ವಿಷಯಗಳಲ್ಲಿಯೂ ಜ್ಞಾನ ಹೊಂದಿದಾಗ ಮಾತ್ರ ವಕೀಲಿ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ಮಾಡಬೇಕು. ಆಗ ಮಾತ್ರ ವೃತ್ತಿಗೆ ನ್ಯಾಯ ಸಲ್ಲಿಸಬಹುದು ಎಂದರು.<br /> <br /> ಕಾಲೇಜಿನ ಪ್ರಾಂಶುಪಾಲ ಪ್ರೊ.ಆರ್.ಹರೀಶ್ ಮಾತನಾಡಿ, ಅಣಕು ನ್ಯಾಯಾಲಯದಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಭವವನ್ನು ನೀಡುತ್ತವೆ. ವಿವಿಧ ರಾಜ್ಯಗಳಿಂದ 21 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಎಂದರು.<br /> <br /> ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಮತ್ತು ತಿರುವನಂತಪುರದ ಕೇರಳ ಲಾ ಅಕಾಡೆಮಿಯ ಕಾಲೇಜಿನ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>