<p><strong>ಪೀಣ್ಯ ದಾಸರಹಳ್ಳಿ:</strong> ‘ಸುತ್ತಮುತ್ತಲಿನ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಆಧುನಿಕತೆಯ ತಂತ್ರಜ್ಞಾನವನ್ನು ಬಳಸಿ ಹೋರಾಟ ರೂಪಿಸಬೇಕು’ ಎಂದು ಡಾ.ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಸಮಿತಿ ಟ್ರಸ್ಟ್ ಅಧ್ಯಕ್ಷ ಎಸ್.ಮರಿಸ್ವಾಮಿ ಸಲಹೆ ನೀಡಿದರು.<br /> <br /> ಮಾಗಡಿ ರಸ್ತೆಯ ಸ್ಫೂರ್ತಿಧಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಶನಿವಾರ ಆಯೋಜಿಸಿದ್ದ ದಲಿತ ಚಳುವಳಿ ಅವಲೋಕನ ಶಿಬಿರದಲ್ಲಿ ಅವರು ಮಾತನಾಡಿದರು.<br /> <br /> ‘ಚಳವಳಿ, ಹೋರಾಟಗಳಲ್ಲಿ ಭಾಗವಹಿಸಲಾಗದವರು ಇರುವ ಸ್ಥಳಗಳಿಂದ ತಂತ್ರಜ್ಞಾನದ ನೆರವಿನಿಂದ ಬೆಂಬಲ ಸೂಚಿಸುವುದರಿಂದ ಹೋರಾಟಗಳಿಗೆ ಬಲ ಬಂದಂತಾಗುತ್ತದೆ’ ಎಂದರು.<br /> <br /> ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಬೆಂಗಳೂರು ವಿ.ವಿ ಪ್ರಾಧ್ಯಾಪಕ ನಟರಾಜ್ ಹುಳಿಯಾರ್, ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕಿ ಇಂದಿರಾ ಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಸುತ್ತಮುತ್ತಲಿನ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಆಧುನಿಕತೆಯ ತಂತ್ರಜ್ಞಾನವನ್ನು ಬಳಸಿ ಹೋರಾಟ ರೂಪಿಸಬೇಕು’ ಎಂದು ಡಾ.ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಸಮಿತಿ ಟ್ರಸ್ಟ್ ಅಧ್ಯಕ್ಷ ಎಸ್.ಮರಿಸ್ವಾಮಿ ಸಲಹೆ ನೀಡಿದರು.<br /> <br /> ಮಾಗಡಿ ರಸ್ತೆಯ ಸ್ಫೂರ್ತಿಧಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಶನಿವಾರ ಆಯೋಜಿಸಿದ್ದ ದಲಿತ ಚಳುವಳಿ ಅವಲೋಕನ ಶಿಬಿರದಲ್ಲಿ ಅವರು ಮಾತನಾಡಿದರು.<br /> <br /> ‘ಚಳವಳಿ, ಹೋರಾಟಗಳಲ್ಲಿ ಭಾಗವಹಿಸಲಾಗದವರು ಇರುವ ಸ್ಥಳಗಳಿಂದ ತಂತ್ರಜ್ಞಾನದ ನೆರವಿನಿಂದ ಬೆಂಬಲ ಸೂಚಿಸುವುದರಿಂದ ಹೋರಾಟಗಳಿಗೆ ಬಲ ಬಂದಂತಾಗುತ್ತದೆ’ ಎಂದರು.<br /> <br /> ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಬೆಂಗಳೂರು ವಿ.ವಿ ಪ್ರಾಧ್ಯಾಪಕ ನಟರಾಜ್ ಹುಳಿಯಾರ್, ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕಿ ಇಂದಿರಾ ಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>