’ನಗರದ ಸುತ್ತ ಲಾಲ್ಬಾಗ್ ಹಾಗೂ ಕಬ್ಬನ್ ಉದ್ಯಾನದ ಮಾದರಿಯ ಉದ್ಯಾನಗಳನ್ನು ನಿರ್ಮಿಸಲಾಗುವುದು. ಕೆರೆಗಳನ್ನು ಸಂರಕ್ಷಿಸಿ, ನೀರಿನ ಗುಣಮಟ್ಟ ಹೆಚ್ಚಿಸುವ ಕುರಿತು ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಜಲ ಸಂರಕ್ಷಣೆಗಾಗಿ ₹1.5 ಲಕ್ಷ ಕೋಟಿ ತೆಗೆದಿರಿಸಿದ್ದು, ಇದನ್ನೂ ಬಳಸಿಕೊಂಡು ನಗರದ ಕೆರೆಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸಲಾಗುವುದು’ ಎಂದರು.