<p><strong>ರಾಮನಗರ: </strong>ವಿದ್ಯಾರ್ಥಿಗಳಲ್ಲಿನ ಕ್ರಿಯಾತ್ಮಕ ಯೋಜನೆಗಳನ್ನು ಹೊರ ತರಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರೀಗೌಡ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಐಜೂರಿನ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತಿ ಫೌಂಡೇಷನ್ ಹಾಗೂ ಎಸ್ಡಿಎಂಸಿ ಸಹಯೋಗದಲ್ಲಿ ಶನಿವಾರ ನಡೆದ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಸ್ತು ಪ್ರದರ್ಶನಗಳಿಂದಾಗಿ ವಿದ್ಯಾರ್ಥಿಗಳ ಜತೆಗೆ ಶಿಕ್ಷಕರು ಜ್ಞಾನಮಟ್ಟವನ್ನು ಹೆಚ್ಚಿಸಿಕೊಳ್ಳಲು ಅವಕಾಶವಿದೆ. ಪಠ್ಯದ ವಿಷಯಗಳನ್ನು ವಸ್ತುಗಳ ಮೂಲಕ ತಿಳಿಸಿಕೊಡುವಂತೆ ಆಗುತ್ತದೆ ಎಂದು ಹೇಳಿದರು.</p>.<p>ಭಾರತಿ ಫೌಂಡೇಷನ್ನ ಸಹಾಯಕ ವ್ಯವಸ್ಥಾಪಕ ಜೋಶಿ ಮಾತನಾಡಿ, ರಸಪ್ರಶ್ನೆ ಸೇರಿದಂತೆ ಸ್ಪೆಲಿಂಗ್ ವಿಜಾರ್ಡ್ ಕಾರ್ಯಕ್ರಮಗಳನ್ನು ತಾಲ್ಲೂಕಿನ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ಪಠ್ಯ ಪುಸ್ತಕದಲ್ಲಿನ ವಿಷಯಗಳ ಮಾದರಿ ತಯಾರು ಮಾಡಿ, ವಸ್ತು ಪ್ರದರ್ಶನಕ್ಕೆ ಹಾಜರು ಪಡಿಸಿದ್ದರು.</p>.<p>ಅಗಸ್ತ್ಯ ಫೌಂಡೇಷನ್ ಸಂಯೋಜಕ ವೀರಣ್ಣ ಗೌಡ, ಶಾಲೆಯ ಮುಖ್ಯಶಿಕ್ಷಕ ಕೇಶವಪ್ಪ ನಾಯಕ, ಎಸ್ ಡಿಎಂಸಿ ಅಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಅಬ್ದುಲ್ ಅಜೀಜ್, ಲತಾ, ಶಾರದ, ರೇಷ್ಮ, ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ವಿದ್ಯಾರ್ಥಿಗಳಲ್ಲಿನ ಕ್ರಿಯಾತ್ಮಕ ಯೋಜನೆಗಳನ್ನು ಹೊರ ತರಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರೀಗೌಡ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಐಜೂರಿನ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತಿ ಫೌಂಡೇಷನ್ ಹಾಗೂ ಎಸ್ಡಿಎಂಸಿ ಸಹಯೋಗದಲ್ಲಿ ಶನಿವಾರ ನಡೆದ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಸ್ತು ಪ್ರದರ್ಶನಗಳಿಂದಾಗಿ ವಿದ್ಯಾರ್ಥಿಗಳ ಜತೆಗೆ ಶಿಕ್ಷಕರು ಜ್ಞಾನಮಟ್ಟವನ್ನು ಹೆಚ್ಚಿಸಿಕೊಳ್ಳಲು ಅವಕಾಶವಿದೆ. ಪಠ್ಯದ ವಿಷಯಗಳನ್ನು ವಸ್ತುಗಳ ಮೂಲಕ ತಿಳಿಸಿಕೊಡುವಂತೆ ಆಗುತ್ತದೆ ಎಂದು ಹೇಳಿದರು.</p>.<p>ಭಾರತಿ ಫೌಂಡೇಷನ್ನ ಸಹಾಯಕ ವ್ಯವಸ್ಥಾಪಕ ಜೋಶಿ ಮಾತನಾಡಿ, ರಸಪ್ರಶ್ನೆ ಸೇರಿದಂತೆ ಸ್ಪೆಲಿಂಗ್ ವಿಜಾರ್ಡ್ ಕಾರ್ಯಕ್ರಮಗಳನ್ನು ತಾಲ್ಲೂಕಿನ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ಪಠ್ಯ ಪುಸ್ತಕದಲ್ಲಿನ ವಿಷಯಗಳ ಮಾದರಿ ತಯಾರು ಮಾಡಿ, ವಸ್ತು ಪ್ರದರ್ಶನಕ್ಕೆ ಹಾಜರು ಪಡಿಸಿದ್ದರು.</p>.<p>ಅಗಸ್ತ್ಯ ಫೌಂಡೇಷನ್ ಸಂಯೋಜಕ ವೀರಣ್ಣ ಗೌಡ, ಶಾಲೆಯ ಮುಖ್ಯಶಿಕ್ಷಕ ಕೇಶವಪ್ಪ ನಾಯಕ, ಎಸ್ ಡಿಎಂಸಿ ಅಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಅಬ್ದುಲ್ ಅಜೀಜ್, ಲತಾ, ಶಾರದ, ರೇಷ್ಮ, ದೇವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>