ಪಿಯುಸಿಎಲ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್ ಮಾತನಾಡಿ,‘ ಯುವಕರು ಪ್ರಗತಿಪರ ಚಿಂತನೆಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾವಂತ ಯುವಕರು ಹೆಚ್ಚು ಸಕ್ರಿಯರಾಗಿರಬೇಕು’ ಎಂದರು. ಸಾಹಿತಿ ಡಾ.ಓ.ನಾಗರಾಜು ಮಾತನಾಡಿದರು. ಪ್ರಾಧ್ಯಾಪಕ ಡಾ.ಮುನಿರಾಜು, ಡಾ.ಮಹಾಲಿಂಗ, ಸಮಾಜ ಕಾರ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ರಾಜಶೇಖರ್, ಲಕ್ಷ್ಮಿರಂಗಯ್ಯ ಇದ್ದರು.