ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿ ಅವರು ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ ದಿನದಿಂದಲೂ ಪ್ರಚಾರದಲ್ಲಿತ್ತು. ಎಎಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಸೇರ್ಪಡೆ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿತ್ತು. ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಆಪ್ ಸೇರುತ್ತಿದ್ದಾರೆ.