<p>ಬೀದರ್: ಮಹಾ ಶಿವರಾತ್ರಿ ನಿಮಿತ್ತ ಇಲ್ಲಿಯ ಪ್ರಸಿದ್ಧ ಪಾಪನಾಶ ಕ್ಷೇತ್ರದಲ್ಲಿ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ನಿಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು.<br />ಮಹಾ ಶಿವರಾತ್ರಿ ನಿಮಿತ್ತ ಉಪವಾಸ ಮಾಡುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಫೌಂಡೇಷನ್ನಿಂದ ಉಪವಾಸದ ದಿನ ಸೇವಿಸಬಹುದಾದ ಉಪಹಾರ ವಿತರಿಸಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.<br />ಮಹಾ ಶಿವರಾತ್ರಿಯು ಬಹುದೊಡ್ಡ ಹಬ್ಬವಾಗಿದ್ದು, ಎಲ್ಲ ಜಾತಿ ಸಮುದಾಯದವರು ಭಕ್ತಿ ಭಾವದಿಂದ ಆಚರಿಸುತ್ತಾರೆ. ಪಾಪನಾಶ ಕ್ಷೇತ್ರದ ಪವಿತ್ರ ಕುಂಡದಲ್ಲಿ ಸ್ನಾನ ಮಾಡಿ, ದರ್ಶನ ಪಡೆದಲ್ಲಿ ಬದುಕು ಪಾವನವಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಾರೆ.<br />ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಸ್ವತ: ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು. ಶಾಂತು ಗೊರಶೆಟ್ಟಿ, ಮಹೇಶ ಪಾಂಚಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಮಹಾ ಶಿವರಾತ್ರಿ ನಿಮಿತ್ತ ಇಲ್ಲಿಯ ಪ್ರಸಿದ್ಧ ಪಾಪನಾಶ ಕ್ಷೇತ್ರದಲ್ಲಿ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ನಿಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು.<br />ಮಹಾ ಶಿವರಾತ್ರಿ ನಿಮಿತ್ತ ಉಪವಾಸ ಮಾಡುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಫೌಂಡೇಷನ್ನಿಂದ ಉಪವಾಸದ ದಿನ ಸೇವಿಸಬಹುದಾದ ಉಪಹಾರ ವಿತರಿಸಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.<br />ಮಹಾ ಶಿವರಾತ್ರಿಯು ಬಹುದೊಡ್ಡ ಹಬ್ಬವಾಗಿದ್ದು, ಎಲ್ಲ ಜಾತಿ ಸಮುದಾಯದವರು ಭಕ್ತಿ ಭಾವದಿಂದ ಆಚರಿಸುತ್ತಾರೆ. ಪಾಪನಾಶ ಕ್ಷೇತ್ರದ ಪವಿತ್ರ ಕುಂಡದಲ್ಲಿ ಸ್ನಾನ ಮಾಡಿ, ದರ್ಶನ ಪಡೆದಲ್ಲಿ ಬದುಕು ಪಾವನವಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಜನ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಾರೆ.<br />ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಸ್ವತ: ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು. ಶಾಂತು ಗೊರಶೆಟ್ಟಿ, ಮಹೇಶ ಪಾಂಚಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>