<p><strong>ಬೀದರ್: </strong>ಕರ್ನಾಟಕದ ಗಡಿಯನ್ನು ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ತೆಲಂಗಾಣ ಸರ್ಕಾರ ₹ 4.49 ಕೋಟಿ ಅನುದಾನ ಒದಗಿಸಿದೆ ಎಂದು ತೆಲಂಗಾಣದ ನಾರಾಯಣಖೇಡದ ಶಾಸಕ ಭೋಪಾಲರೆಡ್ಡಿ ತಿಳಿಸಿದ್ದಾರೆ.</p>.<p>ಬೀದರ್ನ ಜನಪದ ಕಲಾವಿದರ ಬಳಗವು 2019ರ ನವೆಂಬರ್ 2 ರಂದು ಬೀದರ್ ತಾಲ್ಲೂಕಿನ ಗಡಿ ಗ್ರಾಮ ಚಿಲ್ಲರ್ಗಿಯಲ್ಲಿ ಹಮ್ಮಿಕೊಂಡಿದ್ದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಸ್ತೆ ಸಮಸ್ಯೆ ನನ್ನ ಗಮನಕ್ಕೆ ಬಂದಿತು. ವಿಷಯ ಮುಖ್ಯಮಂತ್ರಿ ಗಮನಕ್ಕೆ ತಂದ ಬಳಿಕ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.</p>.<p>ಗಡಿಭಾಗದ ಜನಕ್ಕೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯವಿದೆ. ಜನಪದ ಕಲಾವಿದರ ಬಳಗ ಈ ದಿಸೆಯಲ್ಲಿ ಕೆಲಸ ಮಾಡುತ್ತಿದೆ. ಗಡಿಯಲ್ಲಿ ಅಭಿವೃದ್ಧಿ ಚಟುವಟಿಕೆಗಳೂ ನಡೆಯಬೇಕಾಗಿದೆ. ಸಂಸ್ಥೆಗೆ ಬೀದರ್ ಜಿಲ್ಲಾಡಳಿತ ಅನುದಾನ ಒದಗಿಸಿದ್ದಲ್ಲಿ ತೆಲಂಗಾಣ ಸರ್ಕಾರ ಕೂಡ ಕೈಜೋಡಿಸಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕರ್ನಾಟಕದ ಗಡಿಯನ್ನು ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ತೆಲಂಗಾಣ ಸರ್ಕಾರ ₹ 4.49 ಕೋಟಿ ಅನುದಾನ ಒದಗಿಸಿದೆ ಎಂದು ತೆಲಂಗಾಣದ ನಾರಾಯಣಖೇಡದ ಶಾಸಕ ಭೋಪಾಲರೆಡ್ಡಿ ತಿಳಿಸಿದ್ದಾರೆ.</p>.<p>ಬೀದರ್ನ ಜನಪದ ಕಲಾವಿದರ ಬಳಗವು 2019ರ ನವೆಂಬರ್ 2 ರಂದು ಬೀದರ್ ತಾಲ್ಲೂಕಿನ ಗಡಿ ಗ್ರಾಮ ಚಿಲ್ಲರ್ಗಿಯಲ್ಲಿ ಹಮ್ಮಿಕೊಂಡಿದ್ದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಸ್ತೆ ಸಮಸ್ಯೆ ನನ್ನ ಗಮನಕ್ಕೆ ಬಂದಿತು. ವಿಷಯ ಮುಖ್ಯಮಂತ್ರಿ ಗಮನಕ್ಕೆ ತಂದ ಬಳಿಕ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.</p>.<p>ಗಡಿಭಾಗದ ಜನಕ್ಕೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯವಿದೆ. ಜನಪದ ಕಲಾವಿದರ ಬಳಗ ಈ ದಿಸೆಯಲ್ಲಿ ಕೆಲಸ ಮಾಡುತ್ತಿದೆ. ಗಡಿಯಲ್ಲಿ ಅಭಿವೃದ್ಧಿ ಚಟುವಟಿಕೆಗಳೂ ನಡೆಯಬೇಕಾಗಿದೆ. ಸಂಸ್ಥೆಗೆ ಬೀದರ್ ಜಿಲ್ಲಾಡಳಿತ ಅನುದಾನ ಒದಗಿಸಿದ್ದಲ್ಲಿ ತೆಲಂಗಾಣ ಸರ್ಕಾರ ಕೂಡ ಕೈಜೋಡಿಸಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>