<p><strong>ಬೀದರ್: </strong>ಬೀದರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸಂಸದರ ನಿಧಿಯಿಂದ ₹ 10 ಲಕ್ಷ ಪರಿಹಾರ ಕೊಡಬೇಕು ಎಂದು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘ ಆಗ್ರಹಿಸಿದೆ.</p>.<p>ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದಾರ್ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಶನಿವಾರ ಸಂಸದ ಭಗವಂತ ಖೂಬಾ ಅವರನ್ನು ಭೇಟಿಯಾಗಿ ಅವರಿಗೆ ಮನವಿಪತ್ರಸಲ್ಲಿಸಿದರು.</p>.<p>ಬಡ ಕುಟುಂಬ ಬಾಲಕಿಯ ಮೇಲೆ ಅಮಾನವೀಯ ಕೃತ್ಯ ಎಸಗಲಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡಿದರು.</p>.<p>ಬಾಲಕಿಯ ಕುಟುಂಬಕ್ಕೆ 3 ಎಕರೆ ಜಮೀನು ಮಂಜೂರು ಮಾಡಲು ಸಂಬಂಧಪಟ್ಟವರಿಗೆ ಸರ್ಕಾರ ಶಿಫಾರಸು ಮಾಡಬೇಕು ಎಂದು ಪ್ರತಿಭಟನಕಾರರು ಮನವಿಯಲ್ಲಿಸಂಸದ ಭಗವಂತ ಖೂಬಾರನ್ನು ಒತ್ತಾಯಿಸಿದ್ದಾರೆ.</p>.<p>ಮುಖಂಡರಾದ ನಂದಕುಮಾರ ಜಮಗಿಕರ್, ಸಂಜುಕುಮಾರ ಸಿರ್ಸೆ, ರವೀಂದ್ರ ಬಾಲೆಬಾಯಿ, ಮಹೇಶ ಕೋಲಿ, ಸತೀಶ ಅಲಿಯಂಬರ್, ಚಂದ್ರಕಾಂತ ಹಳ್ಳಿಖಖೇಡಕರ್, ಶರಣಪ್ಪ ಶಾಶೆಂಪೂರ, ರವೀಂದ್ರ ಗುಮಾಸ್ತಿ ಹಾಗೂ ಸುರೇಶ ಅವರು ಈ ವೇಳೆಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಬೀದರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸಂಸದರ ನಿಧಿಯಿಂದ ₹ 10 ಲಕ್ಷ ಪರಿಹಾರ ಕೊಡಬೇಕು ಎಂದು ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘ ಆಗ್ರಹಿಸಿದೆ.</p>.<p>ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದಾರ್ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ಶನಿವಾರ ಸಂಸದ ಭಗವಂತ ಖೂಬಾ ಅವರನ್ನು ಭೇಟಿಯಾಗಿ ಅವರಿಗೆ ಮನವಿಪತ್ರಸಲ್ಲಿಸಿದರು.</p>.<p>ಬಡ ಕುಟುಂಬ ಬಾಲಕಿಯ ಮೇಲೆ ಅಮಾನವೀಯ ಕೃತ್ಯ ಎಸಗಲಾಗಿದೆ. ಈ ಘಟನೆಯನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡಿದರು.</p>.<p>ಬಾಲಕಿಯ ಕುಟುಂಬಕ್ಕೆ 3 ಎಕರೆ ಜಮೀನು ಮಂಜೂರು ಮಾಡಲು ಸಂಬಂಧಪಟ್ಟವರಿಗೆ ಸರ್ಕಾರ ಶಿಫಾರಸು ಮಾಡಬೇಕು ಎಂದು ಪ್ರತಿಭಟನಕಾರರು ಮನವಿಯಲ್ಲಿಸಂಸದ ಭಗವಂತ ಖೂಬಾರನ್ನು ಒತ್ತಾಯಿಸಿದ್ದಾರೆ.</p>.<p>ಮುಖಂಡರಾದ ನಂದಕುಮಾರ ಜಮಗಿಕರ್, ಸಂಜುಕುಮಾರ ಸಿರ್ಸೆ, ರವೀಂದ್ರ ಬಾಲೆಬಾಯಿ, ಮಹೇಶ ಕೋಲಿ, ಸತೀಶ ಅಲಿಯಂಬರ್, ಚಂದ್ರಕಾಂತ ಹಳ್ಳಿಖಖೇಡಕರ್, ಶರಣಪ್ಪ ಶಾಶೆಂಪೂರ, ರವೀಂದ್ರ ಗುಮಾಸ್ತಿ ಹಾಗೂ ಸುರೇಶ ಅವರು ಈ ವೇಳೆಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>