<p><strong>ಬೀದರ್</strong>: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಬೀದರ್ ಹಾಗೂ ಔರಾದ್ ತಾಲ್ಲೂಕುಗಳ 10 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡಿದೆ.</p>.<p>ನಗರದ ಐ.ಎಂ.ಎ ಹಾಲ್ನಲ್ಲಿ ಕ್ಲಬ್ ವತಿಯಿಂದ ಆಯೋಜಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. 34 ವೈದ್ಯರನ್ನು ಸನ್ಮಾನಿಸಲಾಯಿತು.</p>.<p>ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ ಮಾತನಾಡಿ, ಬಡ ಮಹಿಳೆಯರಿಗೆ ನೆರವಾಗಲು ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ಮಹಿಳೆಯರು ಹೊಲಿಗೆ ಹಾಗೂ ಇತರ ಕಾಯಕಗಳ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.</p>.<p>ಕೋವಿಡ್ ಇಡೀ ಜಗತ್ತನ್ನೇ ಕಾಡುತ್ತಿದೆ. ಸೋಂಕಿನಿಂದ ಜನರ ಜೀವ ಉಳಿಸಲು ಹಗಲಿರುಳು ಶ್ರಮಿಸುತ್ತಿರುವ ವೈದ್ಯರ ಸೇವೆ ಶ್ಲಾಘನೀಯವಾಗಿದೆ ಎಂದು ನುಡಿದರು.</p>.<p>ಹಿರಿಯ ವೈದ್ಯ ಡಾ. ಸುಭಾಷ ಕರ್ಪೂರ ಮಾತನಾಡಿ, ವೃತ್ತಿ ಯಾವುದೇ ಆಗಿದ್ದರೂ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ವೈದ್ಯ ವೃತ್ತಿ ಶ್ರೇಷ್ಠವಾಗಿದೆ. ವೈದ್ಯರು ವೃತ್ತಿ ಘನತೆ, ಗೌರವಗಳನ್ನು ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು.</p>.<p>ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ. ಹತ್ತು ಹಲವು ಜನೋಪಯೋಗಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಐ.ಎಂ.ಎ ಬೀದರ್ ಶಾಖೆ ಅಧ್ಯಕ್ಷ ಡಾ. ವಿ.ವಿ. ನಾಗರಾಜ ಹೇಳಿದರು.</p>.<p>ಕ್ಲಬ್ ಉಪಾಧ್ಯಕ್ಷ ಡಾ. ಕಪಿಲ್ ಪಾಟೀಲ, ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ರಘು ಕೃಷ್ಣಮೂರ್ತಿ, ಖಜಾಂಚಿ ಕಾಮಶೆಟ್ಟಿ ಚಿಕ್ಕಬಸೆ, ನಿಕಟಪೂರ್ವ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ, ಡಾ. ಆರತಿ ರಘು, ನಿತಿನ್ ಕರ್ಪೂರ, ಸತೀಶ್ ಸ್ವಾಮಿ, ಶಿವಕುಮಾರ ಪಾಖಲ್, ರಾಜಕುಮಾರ ಅಳ್ಳೆ ಉಪಸ್ಥಿತರಿದ್ದರು.</p>.<p>ಚೇತನ ಮೇಗೂರ ನಿರೂಪಿಸಿದರು. ಕ್ಲಬ್ ಕಾರ್ಯದರ್ಶಿ ಸುಧೀಂದ್ರ ಸಿಂದೋಲ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಬೀದರ್ ಹಾಗೂ ಔರಾದ್ ತಾಲ್ಲೂಕುಗಳ 10 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡಿದೆ.</p>.<p>ನಗರದ ಐ.ಎಂ.ಎ ಹಾಲ್ನಲ್ಲಿ ಕ್ಲಬ್ ವತಿಯಿಂದ ಆಯೋಜಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. 34 ವೈದ್ಯರನ್ನು ಸನ್ಮಾನಿಸಲಾಯಿತು.</p>.<p>ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ ಮಾತನಾಡಿ, ಬಡ ಮಹಿಳೆಯರಿಗೆ ನೆರವಾಗಲು ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ಮಹಿಳೆಯರು ಹೊಲಿಗೆ ಹಾಗೂ ಇತರ ಕಾಯಕಗಳ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.</p>.<p>ಕೋವಿಡ್ ಇಡೀ ಜಗತ್ತನ್ನೇ ಕಾಡುತ್ತಿದೆ. ಸೋಂಕಿನಿಂದ ಜನರ ಜೀವ ಉಳಿಸಲು ಹಗಲಿರುಳು ಶ್ರಮಿಸುತ್ತಿರುವ ವೈದ್ಯರ ಸೇವೆ ಶ್ಲಾಘನೀಯವಾಗಿದೆ ಎಂದು ನುಡಿದರು.</p>.<p>ಹಿರಿಯ ವೈದ್ಯ ಡಾ. ಸುಭಾಷ ಕರ್ಪೂರ ಮಾತನಾಡಿ, ವೃತ್ತಿ ಯಾವುದೇ ಆಗಿದ್ದರೂ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ವೈದ್ಯ ವೃತ್ತಿ ಶ್ರೇಷ್ಠವಾಗಿದೆ. ವೈದ್ಯರು ವೃತ್ತಿ ಘನತೆ, ಗೌರವಗಳನ್ನು ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು.</p>.<p>ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ. ಹತ್ತು ಹಲವು ಜನೋಪಯೋಗಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಐ.ಎಂ.ಎ ಬೀದರ್ ಶಾಖೆ ಅಧ್ಯಕ್ಷ ಡಾ. ವಿ.ವಿ. ನಾಗರಾಜ ಹೇಳಿದರು.</p>.<p>ಕ್ಲಬ್ ಉಪಾಧ್ಯಕ್ಷ ಡಾ. ಕಪಿಲ್ ಪಾಟೀಲ, ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ರಘು ಕೃಷ್ಣಮೂರ್ತಿ, ಖಜಾಂಚಿ ಕಾಮಶೆಟ್ಟಿ ಚಿಕ್ಕಬಸೆ, ನಿಕಟಪೂರ್ವ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ, ಡಾ. ಆರತಿ ರಘು, ನಿತಿನ್ ಕರ್ಪೂರ, ಸತೀಶ್ ಸ್ವಾಮಿ, ಶಿವಕುಮಾರ ಪಾಖಲ್, ರಾಜಕುಮಾರ ಅಳ್ಳೆ ಉಪಸ್ಥಿತರಿದ್ದರು.</p>.<p>ಚೇತನ ಮೇಗೂರ ನಿರೂಪಿಸಿದರು. ಕ್ಲಬ್ ಕಾರ್ಯದರ್ಶಿ ಸುಧೀಂದ್ರ ಸಿಂದೋಲ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>