ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸಮಾವೇಶಕ್ಕೆ 10 ಸಾವಿರ ಕಾರ್ಯಕರ್ತರು

Last Updated 16 ಮಾರ್ಚ್ 2019, 14:29 IST
ಅಕ್ಷರ ಗಾತ್ರ

ಬೀದರ್‌: ‘ಲೋಕಸಭೆ ಚುನಾವಣೆ ಪ್ರಯುಕ್ತ ಕಲಬುರ್ಗಿಯಲ್ಲಿ ಮಾರ್ಚ್ 18 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬೀದರ್‌ ಜಿಲ್ಲೆಯಿಂದ 10 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದರು.

ನಗರದ ಕಾಂಗ್ರೆಸ್‌ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದಲೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಮಾಜಿ ಸಂಸದ ನರಸಿಂಗರಾವ್‌ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್‌, ಕೆಪಿಸಿಸಿ ಕಾರ್ಯದರ್ಶಿಗಳಾದ ರೋಹಿದಾಸ ಘೋಡೆ, ಇರ್ಷಾದ್ ಅಲಿ ಪೈಲ್ವಾನ್, ಅಮೃತರಾವ್‌ ಚಿಮಕೋಡೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ ಜಾಗೀರದಾರ ಉಪಸ್ಥಿತರಿದ್ದರು.

ಸಭೆಯಲ್ಲಿ ಎರಡು ನಿಮಿಷಗಳ ಮೌನ ಆಚರಿಸಿ ಈಚೆಗೆ ನಿಧನರಾದ ಪಕ್ಷದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮಡಿವಾಳಪ್ಪ ಕಾರಬಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ, ಬ್ಲಾಕ್ ಹಾಗೂ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT