<p><strong>ಬೀದರ್:</strong> ತಾಲ್ಲೂಕಿನ ಕೊಳಾರ (ಬಿ) ಸಮೀಪ 1000 ಕೈದಿಗಳ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ₹ 100 ಕೋಟಿ ಬಿಡುಗಡೆ ಮಾಡಲು ಬೆಂಗಳೂರಲ್ಲಿ ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.</p>.<p>1920ರಲ್ಲಿ ಕಟ್ಟಲಾದ ಕಾರಾಗೃಹ ಬಹಳ ಹಳೆಯದಾಗಿದೆ. ಹೀಗಾಗಿ ಹೊಸ ಕಟ್ಟಡಕ್ಕಾಗಿ ಪ್ರಸ್ತಾವನೆ ಸಲ್ಲಿಸಿ ಹಣ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು.</p>.<p>ಈಗಿನ ಕಾರಾಗೃಹದಲ್ಲಿ ಕೇವಲ 116 ಕೈದಿಗಳನ್ನು ಮಾತ್ರ ಇಡಬಹುದಾಗಿದೆ. ಆದರೆ 200ಕ್ಕೂ ಅಧಿಕ ವಿಚಾರಣಾಧೀನ ಕೈದಿಗಳು ಇದ್ದಾರೆ. ಇಲ್ಲಿ ಮೂಲಸೌಕರ್ಯದ ಕೊರತೆಯೂ ಇದೆ. ಸ್ಥಳದ ಕೊರತೆಯಿಂದ ಅನೇಕ ಕೈದಿಗಳನ್ನು ಕಲಬುರ್ಗಿ ಕಾರಾಗೃಹಕ್ಕೆ ಕಳಿಸಲಾಗುತ್ತದೆ.</p>.<p>ಜಿಲ್ಲಾ ಕಾರಾಗೃಹ ನಗರದ ಮಧ್ಯದಲ್ಲಿ ಇದೆ.ಸುತ್ತಮುತ್ತ ಅನೇಕ ಖಾಸಗಿ ಕಟ್ಟಡಗಳು ನಿರ್ಮಾಣವಾಗಿರುವ ಕಾರಣ ಕಾರಾಗೃಹದ ಭದ್ರತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೋಳಾರ(ಬಿ) ಗ್ರಾಮದ ಸರ್ವೇ ನಂ.23ರಲ್ಲಿ ಮಂಜೂರಾಗಿರುವ 49 ಎಕರೆ ಜಮೀನಿನಲ್ಲಿ ನೂತನ ಕೇಂದ್ರ ಕಾರಾಗೃಹವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ತಾಲ್ಲೂಕಿನ ಕೊಳಾರ (ಬಿ) ಸಮೀಪ 1000 ಕೈದಿಗಳ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ₹ 100 ಕೋಟಿ ಬಿಡುಗಡೆ ಮಾಡಲು ಬೆಂಗಳೂರಲ್ಲಿ ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.</p>.<p>1920ರಲ್ಲಿ ಕಟ್ಟಲಾದ ಕಾರಾಗೃಹ ಬಹಳ ಹಳೆಯದಾಗಿದೆ. ಹೀಗಾಗಿ ಹೊಸ ಕಟ್ಟಡಕ್ಕಾಗಿ ಪ್ರಸ್ತಾವನೆ ಸಲ್ಲಿಸಿ ಹಣ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು.</p>.<p>ಈಗಿನ ಕಾರಾಗೃಹದಲ್ಲಿ ಕೇವಲ 116 ಕೈದಿಗಳನ್ನು ಮಾತ್ರ ಇಡಬಹುದಾಗಿದೆ. ಆದರೆ 200ಕ್ಕೂ ಅಧಿಕ ವಿಚಾರಣಾಧೀನ ಕೈದಿಗಳು ಇದ್ದಾರೆ. ಇಲ್ಲಿ ಮೂಲಸೌಕರ್ಯದ ಕೊರತೆಯೂ ಇದೆ. ಸ್ಥಳದ ಕೊರತೆಯಿಂದ ಅನೇಕ ಕೈದಿಗಳನ್ನು ಕಲಬುರ್ಗಿ ಕಾರಾಗೃಹಕ್ಕೆ ಕಳಿಸಲಾಗುತ್ತದೆ.</p>.<p>ಜಿಲ್ಲಾ ಕಾರಾಗೃಹ ನಗರದ ಮಧ್ಯದಲ್ಲಿ ಇದೆ.ಸುತ್ತಮುತ್ತ ಅನೇಕ ಖಾಸಗಿ ಕಟ್ಟಡಗಳು ನಿರ್ಮಾಣವಾಗಿರುವ ಕಾರಣ ಕಾರಾಗೃಹದ ಭದ್ರತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೋಳಾರ(ಬಿ) ಗ್ರಾಮದ ಸರ್ವೇ ನಂ.23ರಲ್ಲಿ ಮಂಜೂರಾಗಿರುವ 49 ಎಕರೆ ಜಮೀನಿನಲ್ಲಿ ನೂತನ ಕೇಂದ್ರ ಕಾರಾಗೃಹವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>