<p>ಬೀದರ್: ಇಲ್ಲಿಯ ರೈಲು ನಿಲ್ದಾಣದ ಆವರಣದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭವನ್ನು ಸಂಸದ ಭಗವಂತ ಖೂಬಾ ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ, ಶಾಸಕರಾದ ರಹೀಂ ಖಾನ್, ಬಂಡೆಪ್ಪ ಖಾಶೆಂಪೂರ, ವಿಧಾನ ಪರಿಷತ್ ರಘುನಾಥರಾವ್ ಮಲ್ಕಾಪೂರೆ, ವಿಜಯಸಿಂಗ್ ಹಾಗೂ ರೈಲ್ವೆ ಅಧಿಕಾರಿಗಳು ಇದ್ದರು.</p>.<p>ಸಂಸದ ಭಗವಂತ ಖೂಬಾ ಅವರು ರೈಲು ನಿಲ್ದಾಣದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ಹಾಗೂ 10.30ಕ್ಕೆ ಮಾಧ್ಯಮಗೋಷ್ಠಿ ನಡೆಸುವ ಕಾರ್ಯಕ್ರಮ ಇತ್ತು. ಪೊಲೀಸ್ ಕವಾಯತ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ತರಾತುರಿಯಲ್ಲಿ 9.45 ಕ್ಕೆ ಅಲ್ಲಿಂದ ಹೊರಟು ರೈಲು ನಿಲ್ದಾಣಕ್ಕೆ ಬಂದರು. ರೈಲು ನಿಲ್ದಾಣದಲ್ಲಿ ಆಗಲೇ ಸಾಕಷ್ಟು ಜನ ಸೇರಿದ್ದರು.</p>.<p>ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ರೈಲ್ವೆ ಅಧಿಕಾರಿಗಳು, ಗಣ್ಯರು ರೈಲು ನಿಲ್ದಾಣದಲ್ಲಿ ಒಂದೂವರೆ ಗಂಟೆ ಕಾಯಬೇಕಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಟೀಕೆಗಳೂ ಕೇಳಿ ಬಂದವು. ಸಂಸದ ಖೂಬಾ 11.20ಕ್ಕೆ ಸ್ಥಳಕ್ಕೆ ಬಂದು ಗುಂಡಿ ಒತ್ತುವ ಮೂಲಕ ಧ್ವಜಾರೋಹಣ ನೆರವೇರಿಸಿದರು.</p>.<p><strong>ಮೂರನೇ ಧ್ವಜಸ್ತಂಭ: </strong>ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ರೈಲು ನಿಲ್ದಾಣಗಳ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲಾಗಿದೆ. ದಕ್ಷಿಣ ಮಧ್ಯ ರೈಲ್ವೆ ವಿಭಾಗದ ಒಟ್ಟು 15 ನಿಲ್ದಾಣಗಳಲ್ಲಿ ಈ ಧ್ವಜಸ್ತಂಬ ಅಳವಡಿಸಲು ನಿರ್ಧರಿಸಲಾಗಿದೆ. ಹೈದರಾಬಾದ್ ಹಾಗೂ ಸಿಕಂದರಾಬಾದ್ನಲ್ಲಿ ಈಗಾಗಲೇ ಧ್ವಜಸ್ತಂಭ ಅಳವಡಿಸಲಾಗಿದ್ದು, ಬೀದರ್ನಲ್ಲಿರುವುದು ಮೂರನೇ ಧ್ವಜಸ್ತಂಬ’ ಎಂದು ತಿಳಿಸಿದರು.</p>.<p>‘ದೇಶಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ರೈಲು ನಿಲ್ದಾಣಗಳಲ್ಲಿ ಧ್ವಜಸ್ತಂಭ ನಿರ್ಮಿಸಲಾಗುತ್ತಿದೆ. ಈಗಾಗಲೇ ರೈಲು ನಿಲ್ಧಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಬೀದರ್ ಮಾರ್ಗವಾಗಿ ಸಿಕಂದರಾಬಾದ್–ಹುಬ್ಬಳ್ಳಿ ರೈಲನ್ನು ಓಡಿಸುವ ಪ್ರಸ್ತಾವ ರೈಲ್ವೆ ಇಲಾಖೆ ಮುಂದೆ ಇದೆ’ ಎಂದು ಹೇಳಿದರು.</p>.<p>‘ಬೆಳಗಾವಿಯಲ್ಲಿ ಪಿಟ್ಲೈನ್ ಇಲ್ಲ. ಪಿಟ್ಲೈನ್ ನಿರ್ಮಾಣವಾದ ಮೇಲೆ ಸಿಕಂದರಾಬಾದ್–ಹುಬ್ಬಳ್ಳಿ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸುವ ಸಾಧ್ಯತೆ ಇದೆ. ಬೀದರ್–ನಾಂದೇಡ್ ರೈಲು ಮಾರ್ಗದ ಡಿಪಿಆರ್ ಆಗಿದೆ. ಹೊಸ ಮಾರ್ಗ ನಿರ್ಮಾಣ ಆಗಬೇಕಿದೆ’ ಎಂದು ತಿಳಿಸಿದರು.</p>.<p>‘ಕಲಬುರ್ಗಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗಿ ಬರಲು ವಿಶೇಷ ರೈಲು ಓಡಿಸುವಂತೆ ಯಾರೊಬ್ಬರೂ ಮನವಿ ಮಾಡಿಲ್ಲ. ಮೊದಲೇ ಮನವಿ ಮಾಡಿದ್ದರೆ ರೈಲು ಓಡಿಸಬಹುದಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಇಲ್ಲಿಯ ರೈಲು ನಿಲ್ದಾಣದ ಆವರಣದಲ್ಲಿ 100 ಅಡಿ ಎತ್ತರದ ಧ್ವಜಸ್ತಂಭವನ್ನು ಸಂಸದ ಭಗವಂತ ಖೂಬಾ ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ, ಶಾಸಕರಾದ ರಹೀಂ ಖಾನ್, ಬಂಡೆಪ್ಪ ಖಾಶೆಂಪೂರ, ವಿಧಾನ ಪರಿಷತ್ ರಘುನಾಥರಾವ್ ಮಲ್ಕಾಪೂರೆ, ವಿಜಯಸಿಂಗ್ ಹಾಗೂ ರೈಲ್ವೆ ಅಧಿಕಾರಿಗಳು ಇದ್ದರು.</p>.<p>ಸಂಸದ ಭಗವಂತ ಖೂಬಾ ಅವರು ರೈಲು ನಿಲ್ದಾಣದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ಹಾಗೂ 10.30ಕ್ಕೆ ಮಾಧ್ಯಮಗೋಷ್ಠಿ ನಡೆಸುವ ಕಾರ್ಯಕ್ರಮ ಇತ್ತು. ಪೊಲೀಸ್ ಕವಾಯತ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ತರಾತುರಿಯಲ್ಲಿ 9.45 ಕ್ಕೆ ಅಲ್ಲಿಂದ ಹೊರಟು ರೈಲು ನಿಲ್ದಾಣಕ್ಕೆ ಬಂದರು. ರೈಲು ನಿಲ್ದಾಣದಲ್ಲಿ ಆಗಲೇ ಸಾಕಷ್ಟು ಜನ ಸೇರಿದ್ದರು.</p>.<p>ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ರೈಲ್ವೆ ಅಧಿಕಾರಿಗಳು, ಗಣ್ಯರು ರೈಲು ನಿಲ್ದಾಣದಲ್ಲಿ ಒಂದೂವರೆ ಗಂಟೆ ಕಾಯಬೇಕಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಟೀಕೆಗಳೂ ಕೇಳಿ ಬಂದವು. ಸಂಸದ ಖೂಬಾ 11.20ಕ್ಕೆ ಸ್ಥಳಕ್ಕೆ ಬಂದು ಗುಂಡಿ ಒತ್ತುವ ಮೂಲಕ ಧ್ವಜಾರೋಹಣ ನೆರವೇರಿಸಿದರು.</p>.<p><strong>ಮೂರನೇ ಧ್ವಜಸ್ತಂಭ: </strong>ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ರೈಲು ನಿಲ್ದಾಣಗಳ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲಾಗಿದೆ. ದಕ್ಷಿಣ ಮಧ್ಯ ರೈಲ್ವೆ ವಿಭಾಗದ ಒಟ್ಟು 15 ನಿಲ್ದಾಣಗಳಲ್ಲಿ ಈ ಧ್ವಜಸ್ತಂಬ ಅಳವಡಿಸಲು ನಿರ್ಧರಿಸಲಾಗಿದೆ. ಹೈದರಾಬಾದ್ ಹಾಗೂ ಸಿಕಂದರಾಬಾದ್ನಲ್ಲಿ ಈಗಾಗಲೇ ಧ್ವಜಸ್ತಂಭ ಅಳವಡಿಸಲಾಗಿದ್ದು, ಬೀದರ್ನಲ್ಲಿರುವುದು ಮೂರನೇ ಧ್ವಜಸ್ತಂಬ’ ಎಂದು ತಿಳಿಸಿದರು.</p>.<p>‘ದೇಶಭಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ರೈಲು ನಿಲ್ದಾಣಗಳಲ್ಲಿ ಧ್ವಜಸ್ತಂಭ ನಿರ್ಮಿಸಲಾಗುತ್ತಿದೆ. ಈಗಾಗಲೇ ರೈಲು ನಿಲ್ಧಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಬೀದರ್ ಮಾರ್ಗವಾಗಿ ಸಿಕಂದರಾಬಾದ್–ಹುಬ್ಬಳ್ಳಿ ರೈಲನ್ನು ಓಡಿಸುವ ಪ್ರಸ್ತಾವ ರೈಲ್ವೆ ಇಲಾಖೆ ಮುಂದೆ ಇದೆ’ ಎಂದು ಹೇಳಿದರು.</p>.<p>‘ಬೆಳಗಾವಿಯಲ್ಲಿ ಪಿಟ್ಲೈನ್ ಇಲ್ಲ. ಪಿಟ್ಲೈನ್ ನಿರ್ಮಾಣವಾದ ಮೇಲೆ ಸಿಕಂದರಾಬಾದ್–ಹುಬ್ಬಳ್ಳಿ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸುವ ಸಾಧ್ಯತೆ ಇದೆ. ಬೀದರ್–ನಾಂದೇಡ್ ರೈಲು ಮಾರ್ಗದ ಡಿಪಿಆರ್ ಆಗಿದೆ. ಹೊಸ ಮಾರ್ಗ ನಿರ್ಮಾಣ ಆಗಬೇಕಿದೆ’ ಎಂದು ತಿಳಿಸಿದರು.</p>.<p>‘ಕಲಬುರ್ಗಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗಿ ಬರಲು ವಿಶೇಷ ರೈಲು ಓಡಿಸುವಂತೆ ಯಾರೊಬ್ಬರೂ ಮನವಿ ಮಾಡಿಲ್ಲ. ಮೊದಲೇ ಮನವಿ ಮಾಡಿದ್ದರೆ ರೈಲು ಓಡಿಸಬಹುದಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>