‘ಈ ಬಾರಿ ಕಮಲನಗರ ಹಾಗೂ ಔರಾದ್ ತಾಲ್ಲೂಕು ಸೇರಿ 3,598 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 13 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಕಮಲನಗರದ ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ, ಔರಾದ್ ಅಮರೇಶ್ವರ ಕಾಲೇಜು ಹಾಗೂ ಔರಾದ್ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರ ಎಂದು ಗುರುತಿಸಲಾಗಿದೆ. ಠಾಣಾಕುಶನೂರ ಪಬ್ಲಿಕ್ ಶಾಲೆ ಅತಿ ಸೂಕ್ಷ್ಮ ಎಂದು ಗುರುತಿಸಿ ಈ ಕೇಂದ್ರಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ತಿಳಿಸಿದರು.