<p><strong>ಔರಾದ್:</strong> ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಗುರುವಾರ ಒಂದೇ ದಿನ 15 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.</p>.<p>ಹಾಲಹಳ್ಳಿ ಗ್ರಾಮದಲ್ಲಿ 9 ಜನರಿಗೆ ಸೋಂಕು ದೃಢಪಟ್ಟಿದೆ. ಔರಾದ್ ಪಟ್ಟಣದ ಗರ್ಭಿಣಿಯೊಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಶಿಕ್ಷಕರ ಕಾಲೊನಿ ಸೀಲ್ಡೌನ್ ಮಾಡಲಾಗಿದೆ.</p>.<p>ಪಟ್ಟಣದ ಸಪ್ತಗಿರಿ ಹೋಟೆಲ್ನಲ್ಲಿ ಕ್ವಾರಂಟೈನ್ನಲ್ಲಿರುವ 30 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಹೋಟೆಲ್ ಅನ್ನು ಸೀಲ್ಡೌನ್ ಮಾಡಲಾಗಿದೆ. ಬಹುತೇಕ ಈ ಎಲ್ಲ ಸೋಂಕಿತರು ಮಹಾರಾಷ್ಟ್ರದ ನಂಟು ಹೊಂದಿರುವುದರಿಂದ ತಾಲ್ಲೂಕಿನ ಜನರಲ್ಲಿ ಸಹಜವಾಗಿಯೇ ಆತಂಕ ಆವರಿಸಿದೆ.</p>.<p class="Subhead"><strong>ಪಾಲನೆಯಾಗದ ನಿಯಮ:</strong> ತಾಲ್ಲೂಕಿನಲ್ಲಿ ಲಾಕ್ಡೌನ್ ನಿಯಮಗಳು ಪಾಲನೆಯಾಗುತ್ತಿಲ್ಲ. ಮದುವೆ–ಸಭೆ ಸಮಾರಂಭಗಳು ನಿರಾತಂಕವಾಗಿ ನಡೆಯುತ್ತಿವೆ. ಮದುವೆಯಲ್ಲಿ 50 ಜನ ಮಾತ್ರ ಸೇರಲು ಅವಕಾಶವಿದೆ. ಆದರೆ ನೂರಾರು ಜನ ಸೇರುವುದು ಸಾಮಾನ್ಯವಾಗಿದೆ. ಕಲ್ಯಾಣ ಮಂಟಪದಲ್ಲೂ ಮದುವೆಗಳು ನಡೆಯುತ್ತಿವೆ. ಕೆಲ ಕಡೆ ಜನ ಮಾಸ್ಕ್ ಇಲ್ಲದೆ ತಿರುಗಾಡುತ್ತಿದ್ದಾರೆ. ತರಕಾರಿ, ಅಂಗಡಿಗಳ ಮುಂದೆ ಜನ ಸೇರಿ ಅಂತರ ಕಾಯ್ದುಕೊಳ್ಳುವ ನಿಯಮ ಗಾಳಿಗೆ ತೂರಲಾಗುತ್ತಿದೆ.</p>.<p class="Subhead">‘ಕೋವಿಡ್ ಸೋಕು ಹೆಚ್ಚುತ್ತಿದ್ದರೂ ಸೂಕ್ತ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರನ್ನು ಬಿಟ್ಟರೆ ಸಂಬಂಧಿತ ಇತರರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ಡಿಎಸ್ಎಸ್ ಸಂಚಾಲಕ ಧನರಾಜ ಮುಸ್ತಾಪುರ ಅಸಮಾಧಾನ ಹೊರ ಹಾಕಿದ್ದಾರೆ.</p>.<p class="Subhead">‘ಕಲ್ಯಾಣ ಮಂಪಟದಲ್ಲಿ ಮದುವೆ ಮಾಡಿದರೂ 50 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಸಂಬಂಧಿತ ಠಾಣೆ ಪಿಎಸ್ಐ ಅವರಿಗೂ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಲಾಕ್ಡೌನ್ ನಿಯಮ ಯಾರೇ ಉಲ್ಲಂಘಿಸಿದರೂ ಪ್ರಕರಣ ದಾಖಲಿಸಬೇಕಾಗುತ್ತದೆ’ ಎಂದು ಸಿಪಿಐ ರಾಘವೇಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಗುರುವಾರ ಒಂದೇ ದಿನ 15 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.</p>.<p>ಹಾಲಹಳ್ಳಿ ಗ್ರಾಮದಲ್ಲಿ 9 ಜನರಿಗೆ ಸೋಂಕು ದೃಢಪಟ್ಟಿದೆ. ಔರಾದ್ ಪಟ್ಟಣದ ಗರ್ಭಿಣಿಯೊಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಶಿಕ್ಷಕರ ಕಾಲೊನಿ ಸೀಲ್ಡೌನ್ ಮಾಡಲಾಗಿದೆ.</p>.<p>ಪಟ್ಟಣದ ಸಪ್ತಗಿರಿ ಹೋಟೆಲ್ನಲ್ಲಿ ಕ್ವಾರಂಟೈನ್ನಲ್ಲಿರುವ 30 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಹೋಟೆಲ್ ಅನ್ನು ಸೀಲ್ಡೌನ್ ಮಾಡಲಾಗಿದೆ. ಬಹುತೇಕ ಈ ಎಲ್ಲ ಸೋಂಕಿತರು ಮಹಾರಾಷ್ಟ್ರದ ನಂಟು ಹೊಂದಿರುವುದರಿಂದ ತಾಲ್ಲೂಕಿನ ಜನರಲ್ಲಿ ಸಹಜವಾಗಿಯೇ ಆತಂಕ ಆವರಿಸಿದೆ.</p>.<p class="Subhead"><strong>ಪಾಲನೆಯಾಗದ ನಿಯಮ:</strong> ತಾಲ್ಲೂಕಿನಲ್ಲಿ ಲಾಕ್ಡೌನ್ ನಿಯಮಗಳು ಪಾಲನೆಯಾಗುತ್ತಿಲ್ಲ. ಮದುವೆ–ಸಭೆ ಸಮಾರಂಭಗಳು ನಿರಾತಂಕವಾಗಿ ನಡೆಯುತ್ತಿವೆ. ಮದುವೆಯಲ್ಲಿ 50 ಜನ ಮಾತ್ರ ಸೇರಲು ಅವಕಾಶವಿದೆ. ಆದರೆ ನೂರಾರು ಜನ ಸೇರುವುದು ಸಾಮಾನ್ಯವಾಗಿದೆ. ಕಲ್ಯಾಣ ಮಂಟಪದಲ್ಲೂ ಮದುವೆಗಳು ನಡೆಯುತ್ತಿವೆ. ಕೆಲ ಕಡೆ ಜನ ಮಾಸ್ಕ್ ಇಲ್ಲದೆ ತಿರುಗಾಡುತ್ತಿದ್ದಾರೆ. ತರಕಾರಿ, ಅಂಗಡಿಗಳ ಮುಂದೆ ಜನ ಸೇರಿ ಅಂತರ ಕಾಯ್ದುಕೊಳ್ಳುವ ನಿಯಮ ಗಾಳಿಗೆ ತೂರಲಾಗುತ್ತಿದೆ.</p>.<p class="Subhead">‘ಕೋವಿಡ್ ಸೋಕು ಹೆಚ್ಚುತ್ತಿದ್ದರೂ ಸೂಕ್ತ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರನ್ನು ಬಿಟ್ಟರೆ ಸಂಬಂಧಿತ ಇತರರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ಡಿಎಸ್ಎಸ್ ಸಂಚಾಲಕ ಧನರಾಜ ಮುಸ್ತಾಪುರ ಅಸಮಾಧಾನ ಹೊರ ಹಾಕಿದ್ದಾರೆ.</p>.<p class="Subhead">‘ಕಲ್ಯಾಣ ಮಂಪಟದಲ್ಲಿ ಮದುವೆ ಮಾಡಿದರೂ 50 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಸಂಬಂಧಿತ ಠಾಣೆ ಪಿಎಸ್ಐ ಅವರಿಗೂ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಲಾಕ್ಡೌನ್ ನಿಯಮ ಯಾರೇ ಉಲ್ಲಂಘಿಸಿದರೂ ಪ್ರಕರಣ ದಾಖಲಿಸಬೇಕಾಗುತ್ತದೆ’ ಎಂದು ಸಿಪಿಐ ರಾಘವೇಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>