ಬೀದರ್: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ.19ರಂದು ಇ-ಮೆಗಾ ಲೋಕ್ ಅದಾಲತ್ ನಡೆಯಿತು.
ಇದರಲ್ಲಿ ಒಟ್ಟು 293 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 3663 ಪ್ರಕರಣಗಳನ್ನು ರಾಜಿ ಸಂದಾನಕ್ಕಾಗಿ ಗುರುತಿಸಲಾಗಿತ್ತು.
ಈ ಪೈಕಿ 281 ವ್ಯಾಜ್ಯಪೂರ್ವ ಮತ್ತು 1374 ಬಾಕಿ ಪ್ರಕರಣಗಳು ಸೇರಿ ಒಟ್ಟು 1655 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಾಡಲೂರ ಸತ್ಯನಾರಾಯಾಣಾಚಾರ್ಯ ಮಾರ್ಗದರ್ಶನದಲ್ಲಿ ಇ- ಮೆಗಾ ಲೋಕ್ ಅದಾಲತ್ ನಡೆಸಲಾಯಿತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಿದ್ರಾಮ ಟಿ.ಪಿ. ತಿಳಿಸಿದ್ದಾರೆ.