<div><strong>ಬೀದರ್:</strong> ಜಿಲ್ಲೆಯಲ್ಲಿ ಚಿಟಗುಪ್ಪದ 14 ಹಾಗೂ ಬೀದರ್ನ 3 ಜನ ಸೇರಿ ಮತ್ತೆ 17 ಜನರಿಗೆ ಕೋವಿಡ್ –19 ದೃಢಪಟ್ಟಿದೆ. ಈ ಮೂಲಕ ಸೋಂಕು ಪೀಡಿತರ ಸಂಖ್ಯೆ 607ಕ್ಕೆ ತಲುಪಿದೆ.</div>.<p>ಚಿಟಗುಪ್ಪದ ಇಬ್ಬರು ಬಾಲಕಿಯರು ಸೇರಿ ಐವರು ಮಹಿಳೆಯರು, ಏಳು ಪುರುಷರು ಹಾಗೂ ಬೀದರ್ನ ಮೂವರು ಪುರುಷರಿಗೆ ಕೋವಿಡ್ –19 ತಗುಲಿದೆ.</p>.<p class="Briefhead">ಜಿಲ್ಲೆಯಲ್ಲಿ ಈವರೆಗೆ 19 ಜನ ಕೋವಿಡ್ –19 ನಿಂದ ಮೃತಪಟ್ಟಿದ್ದಾರೆ. ಬ್ರಿಮ್ಸ್ನ ವಿಶೇಷ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದ 477 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 192 ಕಂಟೇನ್ಮೆಂಟ್ ಪ್ರದೇಶಗಳ ಪೈಕಿ 153 ಸಕ್ರಿಯವಾಗಿವೆ.</p>.<p>ಆಸ್ಪತ್ರೆಯ ನೋಂದಣಿ ಅಮಾನತು: ಕೋವಿಡ್– 19 ನಿಯಂತ್ರಣದಲ್ಲಿ ಎಸ್ಒಪಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಬಸವಕಲ್ಯಾಣದ ಖಾಸಗಿ ಆಸ್ಪತ್ರೆಯೊಂದರ ನೋಂದಣಿ ಅಮಾನತು ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p><strong>ಹಲ್ಲೆ ನಡೆಸಿದವರ ವಿರುದ್ಧ ಕ್ರಮ:</strong>ಕೋವಿಡ್ –19 ಜಿಲ್ಲಾ ನೋಡಲ್ ಅಧಿಕಾರಿಯಾದ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಗೋವಿಂದ ಬಿ. ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರಿಗೆ ನಿರ್ದೇಶನ ನೀಡಿದ್ದಾರೆ.</p>.<p>‘ಸಮುದಾಯದ ಆರೋಗ್ಯ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕೊರೊನಾ ವಾರಿಯರ್ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ. ಇದು ನೇರವಾಗಿ ಜಿಲ್ಲಾಡಳಿತದ ಮೇಲೆ ನಡೆಸಿದ ಹಲ್ಲೆಯಾಗಿದೆ. ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div><strong>ಬೀದರ್:</strong> ಜಿಲ್ಲೆಯಲ್ಲಿ ಚಿಟಗುಪ್ಪದ 14 ಹಾಗೂ ಬೀದರ್ನ 3 ಜನ ಸೇರಿ ಮತ್ತೆ 17 ಜನರಿಗೆ ಕೋವಿಡ್ –19 ದೃಢಪಟ್ಟಿದೆ. ಈ ಮೂಲಕ ಸೋಂಕು ಪೀಡಿತರ ಸಂಖ್ಯೆ 607ಕ್ಕೆ ತಲುಪಿದೆ.</div>.<p>ಚಿಟಗುಪ್ಪದ ಇಬ್ಬರು ಬಾಲಕಿಯರು ಸೇರಿ ಐವರು ಮಹಿಳೆಯರು, ಏಳು ಪುರುಷರು ಹಾಗೂ ಬೀದರ್ನ ಮೂವರು ಪುರುಷರಿಗೆ ಕೋವಿಡ್ –19 ತಗುಲಿದೆ.</p>.<p class="Briefhead">ಜಿಲ್ಲೆಯಲ್ಲಿ ಈವರೆಗೆ 19 ಜನ ಕೋವಿಡ್ –19 ನಿಂದ ಮೃತಪಟ್ಟಿದ್ದಾರೆ. ಬ್ರಿಮ್ಸ್ನ ವಿಶೇಷ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದ 477 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 192 ಕಂಟೇನ್ಮೆಂಟ್ ಪ್ರದೇಶಗಳ ಪೈಕಿ 153 ಸಕ್ರಿಯವಾಗಿವೆ.</p>.<p>ಆಸ್ಪತ್ರೆಯ ನೋಂದಣಿ ಅಮಾನತು: ಕೋವಿಡ್– 19 ನಿಯಂತ್ರಣದಲ್ಲಿ ಎಸ್ಒಪಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಬಸವಕಲ್ಯಾಣದ ಖಾಸಗಿ ಆಸ್ಪತ್ರೆಯೊಂದರ ನೋಂದಣಿ ಅಮಾನತು ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p><strong>ಹಲ್ಲೆ ನಡೆಸಿದವರ ವಿರುದ್ಧ ಕ್ರಮ:</strong>ಕೋವಿಡ್ –19 ಜಿಲ್ಲಾ ನೋಡಲ್ ಅಧಿಕಾರಿಯಾದ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಗೋವಿಂದ ಬಿ. ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರಿಗೆ ನಿರ್ದೇಶನ ನೀಡಿದ್ದಾರೆ.</p>.<p>‘ಸಮುದಾಯದ ಆರೋಗ್ಯ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕೊರೊನಾ ವಾರಿಯರ್ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ. ಇದು ನೇರವಾಗಿ ಜಿಲ್ಲಾಡಳಿತದ ಮೇಲೆ ನಡೆಸಿದ ಹಲ್ಲೆಯಾಗಿದೆ. ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>