ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ಸರಳವಾಗಿ ಕೋವಿಡ್ ನಿಯಮಗಳ ಪ್ರಕಾರ ನಡೆಯುವುದು. ಪ್ರತಿ ವರ್ಷದಂತೆ ಕೊನೆಯ ದಿನ ನಗರದಲ್ಲಿ ಮೆರವಣಿಗೆ ಇರುವುದಿಲ್ಲ. 30ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಉದ್ಘಾಟಿಸುವರು. ಸಿದ್ಧರಾಮೇಶ್ವರ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಅತಿಥಿಗಳಾಗಿ ಆಗಮಿಸುವರು. ಶಿವಶರಣಪ್ಪ ಪಾಟೀಲ ಹಾರೂರಗೇರಿ ಅಧ್ಯಕ್ಷತೆ ವಹಿಸುವರು. ರಾಷ್ಟ್ರೀಯ ಬಸವದಳದ ಅಧ್ಯಕ್ಷ ಬಸವರಾಜ ಧನ್ನೂರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಮಾಲಾ ಬಿ.ನಾರಾಯಣರಾವ್ ಉಪಸ್ಥಿತರಿರುವರು’ ಎಂದು ಮಾಹಿತಿ ನೀಡಿದರು.