ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ ನಿರ್ಮಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ನಾನು ಸಚಿವನಾದ ನಂತರ ವಿಷಯವನ್ನು ಪ್ರಥಮ ಆದ್ಯತೆಯಾಗಿ ಸ್ವೀಕರಿಸಿ, ಸಂಬಂಧಿಸಿದ ಸಚಿವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಅಚ್ಚುಕಟ್ಟಾದ ಭವನ ನಿರ್ಮಾಣ ಕುರಿತು ಪದೇ ಪದೇ ಒತ್ತಡ ಹಾಕುತ್ತಿದ್ದೆ. ಹೀಗಾಗಿ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಕನ್ನಡ ಭವನ ವಿಷಯವು ಈಗ ಇತ್ಯರ್ಥಗೊಂಡಿದೆ ಎಂದು ಹೇಳಿದ್ದಾರೆ.