ಜಿಲ್ಲಾ ಕೇಂದ್ರದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಡೆಸಲು ಸುಸಜ್ಜಿತ ಭವನ ತೀರಾ ಅವಶ್ಯಕವಾಗಿದೆ. ಜಿಲ್ಲಾಡಳಿತ ವರ್ಷದ ಹಿಂದೆಯೇ ಒಂದು ಎಕರೆ ಜಮೀನು ಮಂಜೂರು ಮಾಡಿದೆ. ಕೂಡಲೇ ಅನುದಾನ ಒದಗಿಸಿ ಗಡಿ ಜಿಲ್ಲೆಯಲ್ಲಿ ಕನ್ನಡದ ಬೆಳವಣಿಗೆಗೆ ನೆರವಾಗಬೇಕು ಎಂದು ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಆದೇಶ ನೀಡಿದ್ದರು.