ಜಿಲ್ಲೆಯ ಬಿಜೆಪಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹಾಗೂ ಶಾಸಕ ಶರಣು ಸಲಗರ ನೇತೃತ್ವದಲ್ಲಿ ಮೂರು ಬಣಗಳಾಗಿವೆ. ಈ ನಾಯಕರ ಒಳಜಗಳ ಶಮನಗೊಳಿಸಲು ಪಕ್ಷ ಕ್ರಮ ಕೈಗೊಳ್ಳಲಿದೆಯೇ ಎನ್ನುವ ಪತ್ರಕರ್ತರ ಪ್ರಶ್ನೆಗೆ ಅರುಣಸಿಂಗ್ ಉತ್ತರ ನೀಡದೇ ಜಾರಿಕೊಂಡರು. ಎಲ್ಲ ಪಕ್ಷಗಳಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ ಎಂದರು.