<p><strong>ಬೀದರ್:</strong> ‘ರಾಜ್ಯದಲ್ಲಿ 25 ಪುಕ್ಕಲು ಸಂಸದರು ಇದ್ದಾರೆ. ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ನಿಂತು ಮಾತನಾಡುವ ಎದೆಗಾರಿಕೆ ಇಲ್ಲ. ಸರ್ವಪಕ್ಷಗಳ ನಿಯೋಗ ಒಯ್ಯುವ ಕಾರ್ಯವನ್ನೂ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.</p>.<p>‘ಕೇಂದ್ರದಲ್ಲಿ ಅಧಿಕಾರಿದಲ್ಲಿರುವ ಬಿಜೆಪಿ ಮುಖಂಡರ ಅಸಮರ್ಥ ಕಾರ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಟ್ಯಂತರ ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. 45 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ದೇಶದ ಜಿಡಿಪಿ ಕುಸಿತ ಕಂಡಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಕೇಂದ್ರ ಸರ್ಕಾರವು ರಾಜ್ಯಕ್ಕೆ ಜಿಎಸ್ಟಿ ಪಾಲು ಕೊಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹೆಚ್ಚಿನ ತೆರಿಗೆ ಪಾವತಿಸಿದರೂ ಕರ್ನಾಟಕದತ್ತ ತಾತ್ಸಾರದಿಂದ ನೋಡುತ್ತಿದೆ. ರಾಜ್ಯದ ಬಿಜೆಪಿ ಮುಖಂಡರು ಕೇಂದ್ರ ಮುಖಂಡರನ್ನು ಪ್ರಶ್ನಿಸುತ್ತಿಲ್ಲ’ ಎಂದು ಅವರು ಟೀಕಿಸಿದರು.</p>.<p>‘₹50 ಸಾವಿರ ಕೋಟಿ ಪ್ಯಾಕೇಜ್ ಕೇಳಿದರೆ ಕೇಂದ್ರ ಸರ್ಕಾರ ₹ 1800 ಕೋಟಿ ಮಾತ್ರ ಕೊಟ್ಟಿದೆ. ಪ್ರವಾಹದಿಂದ ಹಾನಿಯಾದರೂ ಪರಿಹಾರ ಕೊಟ್ಟಿಲ್ಲ. ರಾಜ್ಯದ 50 ಸಾವಿರ ಶಾಲೆಗಳಲ್ಲಿ 1 ಕೋಟಿ ವಿದ್ಯಾರ್ಥಿಗಳು ಓದುತ್ತಿದ್ದಾರೆ. 2 ಲಕ್ಷ ಶಿಕ್ಷಕರು ವೇತನ ಮತ್ತು ಪರಿಹಾರವಿಲ್ಲದೇ ಪರದಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಭಾರತವು ಅತಿ ಹೆಚ್ಚು ಸೋಂಕು ಹೊಂದಿರುವ ವಿಶ್ವದ ಎರಡನೇ ದೇಶವಾಗಿದೆ. ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ರಾಜ್ಯದಲ್ಲಿ 25 ಪುಕ್ಕಲು ಸಂಸದರು ಇದ್ದಾರೆ. ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ನಿಂತು ಮಾತನಾಡುವ ಎದೆಗಾರಿಕೆ ಇಲ್ಲ. ಸರ್ವಪಕ್ಷಗಳ ನಿಯೋಗ ಒಯ್ಯುವ ಕಾರ್ಯವನ್ನೂ ಮಾಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.</p>.<p>‘ಕೇಂದ್ರದಲ್ಲಿ ಅಧಿಕಾರಿದಲ್ಲಿರುವ ಬಿಜೆಪಿ ಮುಖಂಡರ ಅಸಮರ್ಥ ಕಾರ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಟ್ಯಂತರ ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. 45 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ದೇಶದ ಜಿಡಿಪಿ ಕುಸಿತ ಕಂಡಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಕೇಂದ್ರ ಸರ್ಕಾರವು ರಾಜ್ಯಕ್ಕೆ ಜಿಎಸ್ಟಿ ಪಾಲು ಕೊಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹೆಚ್ಚಿನ ತೆರಿಗೆ ಪಾವತಿಸಿದರೂ ಕರ್ನಾಟಕದತ್ತ ತಾತ್ಸಾರದಿಂದ ನೋಡುತ್ತಿದೆ. ರಾಜ್ಯದ ಬಿಜೆಪಿ ಮುಖಂಡರು ಕೇಂದ್ರ ಮುಖಂಡರನ್ನು ಪ್ರಶ್ನಿಸುತ್ತಿಲ್ಲ’ ಎಂದು ಅವರು ಟೀಕಿಸಿದರು.</p>.<p>‘₹50 ಸಾವಿರ ಕೋಟಿ ಪ್ಯಾಕೇಜ್ ಕೇಳಿದರೆ ಕೇಂದ್ರ ಸರ್ಕಾರ ₹ 1800 ಕೋಟಿ ಮಾತ್ರ ಕೊಟ್ಟಿದೆ. ಪ್ರವಾಹದಿಂದ ಹಾನಿಯಾದರೂ ಪರಿಹಾರ ಕೊಟ್ಟಿಲ್ಲ. ರಾಜ್ಯದ 50 ಸಾವಿರ ಶಾಲೆಗಳಲ್ಲಿ 1 ಕೋಟಿ ವಿದ್ಯಾರ್ಥಿಗಳು ಓದುತ್ತಿದ್ದಾರೆ. 2 ಲಕ್ಷ ಶಿಕ್ಷಕರು ವೇತನ ಮತ್ತು ಪರಿಹಾರವಿಲ್ಲದೇ ಪರದಾಡುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಭಾರತವು ಅತಿ ಹೆಚ್ಚು ಸೋಂಕು ಹೊಂದಿರುವ ವಿಶ್ವದ ಎರಡನೇ ದೇಶವಾಗಿದೆ. ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>