‘ಬೀದರ್ನ ಪ್ರಾದೇಶಿಕ ಕೇಂದ್ರಕ್ಕೆ ಅಗತ್ಯವಿಲ್ಲದಿದ್ದರೂ ಆರು ಜನ ಸಿಪಾಯಿಗಳನ್ನು ನೇಮಕ ಮಾಡಿಕೊಂಡಿದ್ದನ್ನು ಒಪ್ಪಿಕೊಂಡ ಅವರು ಹಿಂದಿನವರು ತಮ್ಮ ವಿವೇಚನೆ ಬಳಸಿ ನೇಮಕ ಮಾಡಿಕೊಂಡಿದ್ದಾರೆ. ಅವರನ್ನು ಈಗ ತ್ವರಿತವಾಗಿ ಸೇವೆಯಿಂದ ಬಿಡುಗಡೆ ಮಾಡಲಾಗದು. ಕಾನೂನು ಚೌಕಟ್ಟಿನ ಅಡಿಯಲ್ಲೇ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.