<p><strong>ಜನವಾಡ</strong>: ವಿದ್ಯಾನಿಕೇತನ ಹಾಗೂ ಅರಳು ಸಂಸ್ಥೆ ವತಿಯಿಂದ ಇಮೆಜ್ ನೆಕ್ಸ್ಟ್ ಯೋಜನೆಯಡಿ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಹಿಂದುಗಡೆಯ ಅರಳು ಸಂಸ್ಥೆ ಕಚೇರಿಯಲ್ಲಿ 30 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.</p>.<p>ಯದಲಾಪುರ, ಮಂದಕನಳ್ಳಿ, ಅಯಾಸಪುರ, ಕಮಠಾಣ, ಮರ್ಜಾಪುರ, ಅಷ್ಟೂರ, ಮಲ್ಕಾಪುರ ಸೇರಿ ಬೀದರ್ ತಾಲ್ಲೂಕಿನ 30 ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ಕೋವಿಡ್ ಸುರಕ್ಷತಾ ಕಿಟ್ ವಿತರಿಸಲಾಗಿದೆ ಎಂದು ವಿದ್ಯಾನಿಕೇತನ ಇಮೆಜ್ ಯೋಜನೆಯ ಕಲಬುರ್ಗಿ ವಿಭಾಗೀಯ ಸಂಚಾಲಕ ಡಾ. ಕೆ.ಟಿ. ಮೆರಿಲ್ ತಿಳಿಸಿದರು.</p>.<p>ಆರು ತಿಂಗಳ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಜೀವನೋಪಾಯ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೊಲಿಗೆ ಯಂತ್ರಗಳನ್ನು ಕೊಡಲಾಗಿದೆ. ಮಹಿಳೆಯರು ಹೊಲಿಗೆ ಕಾಯಕದ ಮೂಲಕ ತಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಮಹಿಳೆಯರು ಯಾರನ್ನೂ ಅವಲಂಬಿಸಬಾರದು. ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಕಿವಿಮಾತು ಹೇಳಿದರು.</p>.<p>ಅರಳು ಸಂಸ್ಥೆಯ ಸಹ ನಿರ್ದೇಶಕಿ ಸುನಿತಾ, ಸ್ವಯಂ ಸೇವಕರಾದ ಯೋಹಾನ್, ಸುರೇಕಲಾ, ಕವಿತಾ, ಅಂಜಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ</strong>: ವಿದ್ಯಾನಿಕೇತನ ಹಾಗೂ ಅರಳು ಸಂಸ್ಥೆ ವತಿಯಿಂದ ಇಮೆಜ್ ನೆಕ್ಸ್ಟ್ ಯೋಜನೆಯಡಿ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಹಿಂದುಗಡೆಯ ಅರಳು ಸಂಸ್ಥೆ ಕಚೇರಿಯಲ್ಲಿ 30 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.</p>.<p>ಯದಲಾಪುರ, ಮಂದಕನಳ್ಳಿ, ಅಯಾಸಪುರ, ಕಮಠಾಣ, ಮರ್ಜಾಪುರ, ಅಷ್ಟೂರ, ಮಲ್ಕಾಪುರ ಸೇರಿ ಬೀದರ್ ತಾಲ್ಲೂಕಿನ 30 ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ಕೋವಿಡ್ ಸುರಕ್ಷತಾ ಕಿಟ್ ವಿತರಿಸಲಾಗಿದೆ ಎಂದು ವಿದ್ಯಾನಿಕೇತನ ಇಮೆಜ್ ಯೋಜನೆಯ ಕಲಬುರ್ಗಿ ವಿಭಾಗೀಯ ಸಂಚಾಲಕ ಡಾ. ಕೆ.ಟಿ. ಮೆರಿಲ್ ತಿಳಿಸಿದರು.</p>.<p>ಆರು ತಿಂಗಳ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಜೀವನೋಪಾಯ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೊಲಿಗೆ ಯಂತ್ರಗಳನ್ನು ಕೊಡಲಾಗಿದೆ. ಮಹಿಳೆಯರು ಹೊಲಿಗೆ ಕಾಯಕದ ಮೂಲಕ ತಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ಮಾಡಿದರು.</p>.<p>ಮಹಿಳೆಯರು ಯಾರನ್ನೂ ಅವಲಂಬಿಸಬಾರದು. ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಕಿವಿಮಾತು ಹೇಳಿದರು.</p>.<p>ಅರಳು ಸಂಸ್ಥೆಯ ಸಹ ನಿರ್ದೇಶಕಿ ಸುನಿತಾ, ಸ್ವಯಂ ಸೇವಕರಾದ ಯೋಹಾನ್, ಸುರೇಕಲಾ, ಕವಿತಾ, ಅಂಜಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>