<p><strong>ಭಾಲ್ಕಿ: ‘</strong>ಡಾ.ಚನ್ನಬಸವ ಪಟ್ಟದ್ದೇವರು ಪತ್ತಿನ ಸಹಕಾರ ಸಂಘಕ್ಕೆ ₹32 ಲಕ್ಷ ನಿವ್ವಳ ಲಾಭವಾಗಿದೆ’ ಎಂದು ಸಂಘದ ಅಧ್ಯಕ್ಷ ಡಿ.ಕೆ.ಸಿದ್ರಾಮ ತಿಳಿಸಿದರು.</p>.<p>ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ 19ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಪ್ರತಿವರ್ಷ ಸಹಕಾರ ಸಂಘ ಪ್ರಗತಿ ಪಥದಲ್ಲಿ ಸಾಗುತ್ತಿರುವುದು ಖುಷಿ ತಂದು ಕೊಟ್ಟಿದೆ. ಪ್ರಾಮಾಣಿಕ ವ್ಯಾಪಾರಿಗಳನ್ನು ಗುರುತಿಸಿ ಸಾಲ ನೀಡುವ ಮೂಲಕ ಅವರ ಆರ್ಥಿಕ ಏಳಿಗೆಗೆ ಸಹಕರಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.</p>.<p>ಸಾನ್ನಿಧ್ಯ ವಹಿಸಿ ಮಾತನಾಡಿದ ಗುರುಬಸವ ಪಟ್ಟದ್ದೇವರು,‘ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳು ಮುಖ್ಯ ಪಾತ್ರ ವಹಿಸುತ್ತಿವೆ’ ಎಂದು ಹೇಳಿದರು.</p>.<p>ಉತ್ತಮ ಗ್ರಾಹಕರಾದ ವೀರಶೆಟ್ಟಿ ಉಮಾ, ಬಸವರಾಜ ಹಡಪದ, ಶಾಂತಯ್ಯ ಸ್ವಾಮಿ ಹಾಗೂ ಅಡವೆಪ್ಪ ಪಟ್ನೆ ಅವರನ್ನು ಸನ್ಮಾನಿಸಲಾಯಿತು.</p>.<p>ನಿರ್ದೇಶಕರಾದ ರಾಜಶೇಖರ ಅಷ್ಟೂರೆ, ಬಾಬುರಾವ್ ಜಲ್ದೆ, ಶರದ ಸಿರ್ಸೆ, ಲೆಕ್ಕ ಪರಿಶೋಧಕ ಚಂದ್ರಶೇಖರ ಪಾಟೀಲ, ಬಂಡೆಪ್ಪ ಕಂಟೆ ಹಾಗೂ ರವಿ ಮೀಸೆ ಇದ್ದರು.</p>.<p>ಉಪಾಧ್ಯಕ್ಷ ಶರಣಪ್ಪ ಬಿರಾದಾರ ಸ್ವಾಗತಿಸಿದರು. ವ್ಯವಸ್ಥಾಪಕ ಗಣಪತಿ ಬಾವಗೆ ಹಣಕಾಸು ವಹಿವಾಟಿನ ವರದಿ ಮಂಡಿಸಿದರು. ವೀರಣ್ಣ ಕುಂಬಾರ ನಿರೂಪಿಸಿದರು. ಅನಿಲ್ ಕುಮಾರ ಹಾಲಕುಡೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: ‘</strong>ಡಾ.ಚನ್ನಬಸವ ಪಟ್ಟದ್ದೇವರು ಪತ್ತಿನ ಸಹಕಾರ ಸಂಘಕ್ಕೆ ₹32 ಲಕ್ಷ ನಿವ್ವಳ ಲಾಭವಾಗಿದೆ’ ಎಂದು ಸಂಘದ ಅಧ್ಯಕ್ಷ ಡಿ.ಕೆ.ಸಿದ್ರಾಮ ತಿಳಿಸಿದರು.</p>.<p>ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ 19ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಪ್ರತಿವರ್ಷ ಸಹಕಾರ ಸಂಘ ಪ್ರಗತಿ ಪಥದಲ್ಲಿ ಸಾಗುತ್ತಿರುವುದು ಖುಷಿ ತಂದು ಕೊಟ್ಟಿದೆ. ಪ್ರಾಮಾಣಿಕ ವ್ಯಾಪಾರಿಗಳನ್ನು ಗುರುತಿಸಿ ಸಾಲ ನೀಡುವ ಮೂಲಕ ಅವರ ಆರ್ಥಿಕ ಏಳಿಗೆಗೆ ಸಹಕರಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.</p>.<p>ಸಾನ್ನಿಧ್ಯ ವಹಿಸಿ ಮಾತನಾಡಿದ ಗುರುಬಸವ ಪಟ್ಟದ್ದೇವರು,‘ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳು ಮುಖ್ಯ ಪಾತ್ರ ವಹಿಸುತ್ತಿವೆ’ ಎಂದು ಹೇಳಿದರು.</p>.<p>ಉತ್ತಮ ಗ್ರಾಹಕರಾದ ವೀರಶೆಟ್ಟಿ ಉಮಾ, ಬಸವರಾಜ ಹಡಪದ, ಶಾಂತಯ್ಯ ಸ್ವಾಮಿ ಹಾಗೂ ಅಡವೆಪ್ಪ ಪಟ್ನೆ ಅವರನ್ನು ಸನ್ಮಾನಿಸಲಾಯಿತು.</p>.<p>ನಿರ್ದೇಶಕರಾದ ರಾಜಶೇಖರ ಅಷ್ಟೂರೆ, ಬಾಬುರಾವ್ ಜಲ್ದೆ, ಶರದ ಸಿರ್ಸೆ, ಲೆಕ್ಕ ಪರಿಶೋಧಕ ಚಂದ್ರಶೇಖರ ಪಾಟೀಲ, ಬಂಡೆಪ್ಪ ಕಂಟೆ ಹಾಗೂ ರವಿ ಮೀಸೆ ಇದ್ದರು.</p>.<p>ಉಪಾಧ್ಯಕ್ಷ ಶರಣಪ್ಪ ಬಿರಾದಾರ ಸ್ವಾಗತಿಸಿದರು. ವ್ಯವಸ್ಥಾಪಕ ಗಣಪತಿ ಬಾವಗೆ ಹಣಕಾಸು ವಹಿವಾಟಿನ ವರದಿ ಮಂಡಿಸಿದರು. ವೀರಣ್ಣ ಕುಂಬಾರ ನಿರೂಪಿಸಿದರು. ಅನಿಲ್ ಕುಮಾರ ಹಾಲಕುಡೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>