<p><strong>ಬೀದರ್</strong>: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿ ಸಾಧನೆಗೈದ ಸಾಯಿ ಸ್ಫೂರ್ತಿ ಪದವಿಪೂರ್ವ ವಿಜ್ಞಾನ ಕಾಲೇಜು ಹಾಗೂ ಬಾಬು ಬಿರಾದಾರ ಪದವಿಪೂರ್ವ ವಿಜ್ಞಾನ ಕಾಲೇಜಿನ 33 ವಿದ್ಯಾರ್ಥಿಗಳನ್ನು ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೇಜಗಂ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.</p>.<p>ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರ ಮಾರ್ಗದರ್ಶನ, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಗೆ 19ನೇ ಸ್ಥಾನ ಲಭಿಸಿದೆ ಎಂದು ಅವರು ಹೇಳಿದರು.</p>.<p>ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ ಎಂದು ತಿಳಿಸಿದರು.</p>.<p>ದ್ವಿತೀಯ ಪಿಯುಸಿ ನಂತರ ವಿದ್ಯಾರ್ಥಿಗಳ ಮುಂದೆ ಹಲವು ಆಯ್ಕೆಗಳು ಇವೆ. ಪಾಲಕರು ತಮ್ಮ ಮಕ್ಕಳಿಗೆ ಅವರ ಆಸಕ್ತಿಯ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಸಲಹೆ ಮಾಡಿದರು.</p>.<p>ಗುಣಮಟ್ಟದ ಶಿಕ್ಷಣದಿಂದಾಗಿ ಸಾಯಿಸ್ಫೂರ್ತಿ ಕಾಲೇಜು ಈ ಬಾರಿಯ ಫಲಿತಾಂಶದಲ್ಲಿ ನಗರದಲ್ಲಿ ಪ್ರಥಮ ಹಾಗೂ ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ಹೇಳಿದರು.</p>.<p>ಸಾಯಿ ಸ್ಫೂರ್ತಿ ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಬಿರಾದಾರ ಮಾತನಾಡಿ, ಕಾಲೇಜಿನಲ್ಲಿ ನುರಿತ, ಅನುಭವಿ ಉಪನ್ಯಾಸಕರು ಇದ್ದಾರೆ. ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಪರಿಣಾಮವಾಗಿ, ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ದೊರಕಿದೆ. ಸಿಇಟಿ, ನೀಟ್ನಲ್ಲೂ ಒಳ್ಳೆಯ ಫಲಿತಾಂಶದ ನಿರೀಕ್ಷೆ ಇದೆ ಎಂದು ತಿಳಿಸಿದರು.</p>.<p>ಕಾಲೇಜು ಪಠ್ಯದ ಜತೆಗೆ ವಿವಿಧ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.</p>.<p>ಶಿವಕುಮಾರ ಮಚಕೂರೆ, ಪಾಲಕರಾದ ಚಂದ್ರಕಾಂತ ಯದಲಾಪುರೆ, ಕವಿತಾ ಹಿರೇಮಠ ಮಾತನಾಡಿದರು.</p>.<p>ಉಪನ್ಯಾಸಕರಾದ ರಾಘವೇಂದ್ರ ಬಿ., ಗಜಾನಂದ, ವೀರೇಶ, ನಯಿಮ್ ಅಲಿ, ಶಿವಕುಮಾರ, ಶ್ರೀಕಾಂತ, ಶ್ರುತಿ, ಪೂಜಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಚನ್ನಬಸವೇಶ್ವರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿ ಸಾಧನೆಗೈದ ಸಾಯಿ ಸ್ಫೂರ್ತಿ ಪದವಿಪೂರ್ವ ವಿಜ್ಞಾನ ಕಾಲೇಜು ಹಾಗೂ ಬಾಬು ಬಿರಾದಾರ ಪದವಿಪೂರ್ವ ವಿಜ್ಞಾನ ಕಾಲೇಜಿನ 33 ವಿದ್ಯಾರ್ಥಿಗಳನ್ನು ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೇಜಗಂ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.</p>.<p>ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರ ಮಾರ್ಗದರ್ಶನ, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಗೆ 19ನೇ ಸ್ಥಾನ ಲಭಿಸಿದೆ ಎಂದು ಅವರು ಹೇಳಿದರು.</p>.<p>ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ ಎಂದು ತಿಳಿಸಿದರು.</p>.<p>ದ್ವಿತೀಯ ಪಿಯುಸಿ ನಂತರ ವಿದ್ಯಾರ್ಥಿಗಳ ಮುಂದೆ ಹಲವು ಆಯ್ಕೆಗಳು ಇವೆ. ಪಾಲಕರು ತಮ್ಮ ಮಕ್ಕಳಿಗೆ ಅವರ ಆಸಕ್ತಿಯ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಸಲಹೆ ಮಾಡಿದರು.</p>.<p>ಗುಣಮಟ್ಟದ ಶಿಕ್ಷಣದಿಂದಾಗಿ ಸಾಯಿಸ್ಫೂರ್ತಿ ಕಾಲೇಜು ಈ ಬಾರಿಯ ಫಲಿತಾಂಶದಲ್ಲಿ ನಗರದಲ್ಲಿ ಪ್ರಥಮ ಹಾಗೂ ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ಹೇಳಿದರು.</p>.<p>ಸಾಯಿ ಸ್ಫೂರ್ತಿ ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಬಿರಾದಾರ ಮಾತನಾಡಿ, ಕಾಲೇಜಿನಲ್ಲಿ ನುರಿತ, ಅನುಭವಿ ಉಪನ್ಯಾಸಕರು ಇದ್ದಾರೆ. ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಪರಿಣಾಮವಾಗಿ, ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ದೊರಕಿದೆ. ಸಿಇಟಿ, ನೀಟ್ನಲ್ಲೂ ಒಳ್ಳೆಯ ಫಲಿತಾಂಶದ ನಿರೀಕ್ಷೆ ಇದೆ ಎಂದು ತಿಳಿಸಿದರು.</p>.<p>ಕಾಲೇಜು ಪಠ್ಯದ ಜತೆಗೆ ವಿವಿಧ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.</p>.<p>ಶಿವಕುಮಾರ ಮಚಕೂರೆ, ಪಾಲಕರಾದ ಚಂದ್ರಕಾಂತ ಯದಲಾಪುರೆ, ಕವಿತಾ ಹಿರೇಮಠ ಮಾತನಾಡಿದರು.</p>.<p>ಉಪನ್ಯಾಸಕರಾದ ರಾಘವೇಂದ್ರ ಬಿ., ಗಜಾನಂದ, ವೀರೇಶ, ನಯಿಮ್ ಅಲಿ, ಶಿವಕುಮಾರ, ಶ್ರೀಕಾಂತ, ಶ್ರುತಿ, ಪೂಜಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಚನ್ನಬಸವೇಶ್ವರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>