ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: 33 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಸಾಯಿ ಸ್ಫೂರ್ತಿ, ಬಾಬು ಬಿರಾದಾರ ಪದವಿಪೂರ್ವ ವಿಜ್ಞಾನ ಕಾಲೇಜು
Last Updated 7 ಆಗಸ್ಟ್ 2020, 14:59 IST
ಅಕ್ಷರ ಗಾತ್ರ

ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿ ಸಾಧನೆಗೈದ ಸಾಯಿ ಸ್ಫೂರ್ತಿ ಪದವಿಪೂರ್ವ ವಿಜ್ಞಾನ ಕಾಲೇಜು ಹಾಗೂ ಬಾಬು ಬಿರಾದಾರ ಪದವಿಪೂರ್ವ ವಿಜ್ಞಾನ ಕಾಲೇಜಿನ 33 ವಿದ್ಯಾರ್ಥಿಗಳನ್ನು ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೇಜಗಂ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರ ಮಾರ್ಗದರ್ಶನ, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಗೆ 19ನೇ ಸ್ಥಾನ ಲಭಿಸಿದೆ ಎಂದು ಅವರು ಹೇಳಿದರು.

ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ನಂತರ ವಿದ್ಯಾರ್ಥಿಗಳ ಮುಂದೆ ಹಲವು ಆಯ್ಕೆಗಳು ಇವೆ. ಪಾಲಕರು ತಮ್ಮ ಮಕ್ಕಳಿಗೆ ಅವರ ಆಸಕ್ತಿಯ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಸಲಹೆ ಮಾಡಿದರು.

ಗುಣಮಟ್ಟದ ಶಿಕ್ಷಣದಿಂದಾಗಿ ಸಾಯಿಸ್ಫೂರ್ತಿ ಕಾಲೇಜು ಈ ಬಾರಿಯ ಫಲಿತಾಂಶದಲ್ಲಿ ನಗರದಲ್ಲಿ ಪ್ರಥಮ ಹಾಗೂ ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ಹೇಳಿದರು.

ಸಾಯಿ ಸ್ಫೂರ್ತಿ ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಬಿರಾದಾರ ಮಾತನಾಡಿ, ಕಾಲೇಜಿನಲ್ಲಿ ನುರಿತ, ಅನುಭವಿ ಉಪನ್ಯಾಸಕರು ಇದ್ದಾರೆ. ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಪರಿಣಾಮವಾಗಿ, ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ದೊರಕಿದೆ. ಸಿಇಟಿ, ನೀಟ್‍ನಲ್ಲೂ ಒಳ್ಳೆಯ ಫಲಿತಾಂಶದ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕಾಲೇಜು ಪಠ್ಯದ ಜತೆಗೆ ವಿವಿಧ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.

ಶಿವಕುಮಾರ ಮಚಕೂರೆ, ಪಾಲಕರಾದ ಚಂದ್ರಕಾಂತ ಯದಲಾಪುರೆ, ಕವಿತಾ ಹಿರೇಮಠ ಮಾತನಾಡಿದರು.

ಉಪನ್ಯಾಸಕರಾದ ರಾಘವೇಂದ್ರ ಬಿ., ಗಜಾನಂದ, ವೀರೇಶ, ನಯಿಮ್‌ ಅಲಿ, ಶಿವಕುಮಾರ, ಶ್ರೀಕಾಂತ, ಶ್ರುತಿ, ಪೂಜಾ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಚನ್ನಬಸವೇಶ್ವರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT