<p><strong>ಭಾಲ್ಕಿ</strong>: ‘ಬೀದರ್ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸುಮಾರು 13 ಸಾವಿರ ಸ್ವಸಹಾಯ ಸಂಘಗಳಿಗೆ ₹5 ಕೋಟಿ ಲಾಭಾಂಶ ಸಿಕ್ಕಿದೆ’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಉಮರಬ್ಬ ಹೇಳಿದರು.</p>.<p>ಪಟ್ಟಣದ ಭೀಮನಗರ ಬಡಾವಣೆಯ ಹನುಮಾನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರಗತಿ ಬಂಧು ಸ್ವಸಹಾಯ ತಂಡದ ಸದಸ್ಯರ ಲಾಭಾಂಶ ಹಂಚಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು 35 ವರ್ಷಗಳ ಹಿಂದೆ ಹುಟ್ಟು ಹಾಕಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಸಂಸ್ಥೆಯಿಂದ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಆಮ್ಲಜನಕ, ಆಂಬುಲೆನ್ಸ್, ಆಹಾರ ಕಿಟ್, ಮಾಸಾಶನ ಸೇರಿ ಮುಂತಾದ ಸೌಲಭ್ಯ ಕಲ್ಪಿಸಿ ಬಡಜನರ ನೆರವಿಗೆ ಧಾವಿಸುವ ಪ್ರಯತ್ನ ಮಾಡಲಾಗಿದೆ’ ಎಂದರು.</p>.<p>‘ಉತ್ತಮವಾಗಿ ಬ್ಯಾಂಕ್ ವ್ಯವಹಾರ ನಡೆಸಿದ ಸ್ವಸಹಾಯ ಸಂಘಗಳಿಗೆ ಧರ್ಮಸ್ಥಳ ಸಂಸ್ಥೆಯಿಂದ ಲಾಭಾಂಶ ನೀಡಲಾಗುತ್ತಿದೆ . ಬೀದರ್ ಜಿಲ್ಲೆಗೆ ₹5 ಕೋಟಿ ಲಾಭಾಂಶ ಬಂದಿದೆ. ಭಾಲ್ಕಿ ತಾಲ್ಲೂಕಿಗೆ ₹1 ಕೋಟಿ ಲಾಭಾಂಶ ಬಂದಿದ್ದು, ಸಂಘದ ಸದಸ್ಯರು ಲಾಭಾಂಶ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ‘ಧರ್ಮಸ್ಥಳ ಸಂಸ್ಥೆಯ ಜನಪರ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ’ ಎಂದರು.</p>.<p>ತಾಲ್ಲೂಕು ಯೋಜನಾಧಿಕಾರಿ ಮಹಾಂತೇಶ ಎಸ್. ಮಾತನಾಡಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕ ಮಹೇಶ ಬಾಲಡಗು, ಅಂಗದರಾವ್ ಇದ್ದರು. ರೇಖಾ ಸಂಗಡಿಗರು ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ಅಕ್ಕಮಹಾದೇವಿ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ‘ಬೀದರ್ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸುಮಾರು 13 ಸಾವಿರ ಸ್ವಸಹಾಯ ಸಂಘಗಳಿಗೆ ₹5 ಕೋಟಿ ಲಾಭಾಂಶ ಸಿಕ್ಕಿದೆ’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಉಮರಬ್ಬ ಹೇಳಿದರು.</p>.<p>ಪಟ್ಟಣದ ಭೀಮನಗರ ಬಡಾವಣೆಯ ಹನುಮಾನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರಗತಿ ಬಂಧು ಸ್ವಸಹಾಯ ತಂಡದ ಸದಸ್ಯರ ಲಾಭಾಂಶ ಹಂಚಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು 35 ವರ್ಷಗಳ ಹಿಂದೆ ಹುಟ್ಟು ಹಾಕಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಸಂಸ್ಥೆಯಿಂದ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಆಮ್ಲಜನಕ, ಆಂಬುಲೆನ್ಸ್, ಆಹಾರ ಕಿಟ್, ಮಾಸಾಶನ ಸೇರಿ ಮುಂತಾದ ಸೌಲಭ್ಯ ಕಲ್ಪಿಸಿ ಬಡಜನರ ನೆರವಿಗೆ ಧಾವಿಸುವ ಪ್ರಯತ್ನ ಮಾಡಲಾಗಿದೆ’ ಎಂದರು.</p>.<p>‘ಉತ್ತಮವಾಗಿ ಬ್ಯಾಂಕ್ ವ್ಯವಹಾರ ನಡೆಸಿದ ಸ್ವಸಹಾಯ ಸಂಘಗಳಿಗೆ ಧರ್ಮಸ್ಥಳ ಸಂಸ್ಥೆಯಿಂದ ಲಾಭಾಂಶ ನೀಡಲಾಗುತ್ತಿದೆ . ಬೀದರ್ ಜಿಲ್ಲೆಗೆ ₹5 ಕೋಟಿ ಲಾಭಾಂಶ ಬಂದಿದೆ. ಭಾಲ್ಕಿ ತಾಲ್ಲೂಕಿಗೆ ₹1 ಕೋಟಿ ಲಾಭಾಂಶ ಬಂದಿದ್ದು, ಸಂಘದ ಸದಸ್ಯರು ಲಾಭಾಂಶ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ‘ಧರ್ಮಸ್ಥಳ ಸಂಸ್ಥೆಯ ಜನಪರ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ’ ಎಂದರು.</p>.<p>ತಾಲ್ಲೂಕು ಯೋಜನಾಧಿಕಾರಿ ಮಹಾಂತೇಶ ಎಸ್. ಮಾತನಾಡಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕ ಮಹೇಶ ಬಾಲಡಗು, ಅಂಗದರಾವ್ ಇದ್ದರು. ರೇಖಾ ಸಂಗಡಿಗರು ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ಅಕ್ಕಮಹಾದೇವಿ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>