ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಸಾವು: ₹5 ಲಕ್ಷ ಪರಿಹಾರ ವಿತರಣೆ

Last Updated 1 ಜುಲೈ 2021, 4:20 IST
ಅಕ್ಷರ ಗಾತ್ರ

ಜನವಾಡ: ಸಿಡಿಲು ಬಡಿದು ಮೃತಪಟ್ಟ ಬೀದರ್ ತಾಲ್ಲೂಕಿನ ಕಾಶೆಂಪೂರ (ಪಿ) ಗ್ರಾಮದ ಚಿದಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ₹5 ಲಕ್ಷದ ಚೆಕ್‍ನ್ನು ಶಾಸಕ ಬಂಡೆಪ್ಪ ಕಾಶೆಂಪೂರ್ ಗ್ರಾಮದಲ್ಲಿ ಬುಧವಾರ ವಿತರಿಸಿದರು.

‘ಮೃತರ ಪತ್ನಿಗೆ ವಿಧವಾ ವೇತನ ಮಂಜೂರು ಮಾಡಬೇಕು. ರಾಷ್ಟ್ರೀಯ ಭದ್ರತಾ ಯೋಜನೆ ಪರಿಹಾರ ಹಾಗೂ ಶವ ಸಂಸ್ಕಾರ ಹಣ ಬೇಗ ದೊರಕಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅರ್ಹರಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ ಮಂಜೂರು ಮಾಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ತಹಶೀಲ್ದಾರ್ ಗಂಗಾದೇವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬಜರಂಗ ತಮಗೊಂಡ, ಶಿವಕುಮಾರ, ಮಂಜುನಾಥ, ಮೋಹನ್ ಸಾಗರ, ನರಸಪ್ಪ ಬಜಗೊಂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT