<p>ಜನವಾಡ: ಸಿಡಿಲು ಬಡಿದು ಮೃತಪಟ್ಟ ಬೀದರ್ ತಾಲ್ಲೂಕಿನ ಕಾಶೆಂಪೂರ (ಪಿ) ಗ್ರಾಮದ ಚಿದಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ₹5 ಲಕ್ಷದ ಚೆಕ್ನ್ನು ಶಾಸಕ ಬಂಡೆಪ್ಪ ಕಾಶೆಂಪೂರ್ ಗ್ರಾಮದಲ್ಲಿ ಬುಧವಾರ ವಿತರಿಸಿದರು.</p>.<p>‘ಮೃತರ ಪತ್ನಿಗೆ ವಿಧವಾ ವೇತನ ಮಂಜೂರು ಮಾಡಬೇಕು. ರಾಷ್ಟ್ರೀಯ ಭದ್ರತಾ ಯೋಜನೆ ಪರಿಹಾರ ಹಾಗೂ ಶವ ಸಂಸ್ಕಾರ ಹಣ ಬೇಗ ದೊರಕಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಅರ್ಹರಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ ಮಂಜೂರು ಮಾಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ತಹಶೀಲ್ದಾರ್ ಗಂಗಾದೇವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬಜರಂಗ ತಮಗೊಂಡ, ಶಿವಕುಮಾರ, ಮಂಜುನಾಥ, ಮೋಹನ್ ಸಾಗರ, ನರಸಪ್ಪ ಬಜಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜನವಾಡ: ಸಿಡಿಲು ಬಡಿದು ಮೃತಪಟ್ಟ ಬೀದರ್ ತಾಲ್ಲೂಕಿನ ಕಾಶೆಂಪೂರ (ಪಿ) ಗ್ರಾಮದ ಚಿದಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ₹5 ಲಕ್ಷದ ಚೆಕ್ನ್ನು ಶಾಸಕ ಬಂಡೆಪ್ಪ ಕಾಶೆಂಪೂರ್ ಗ್ರಾಮದಲ್ಲಿ ಬುಧವಾರ ವಿತರಿಸಿದರು.</p>.<p>‘ಮೃತರ ಪತ್ನಿಗೆ ವಿಧವಾ ವೇತನ ಮಂಜೂರು ಮಾಡಬೇಕು. ರಾಷ್ಟ್ರೀಯ ಭದ್ರತಾ ಯೋಜನೆ ಪರಿಹಾರ ಹಾಗೂ ಶವ ಸಂಸ್ಕಾರ ಹಣ ಬೇಗ ದೊರಕಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಅರ್ಹರಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ ಮಂಜೂರು ಮಾಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ತಹಶೀಲ್ದಾರ್ ಗಂಗಾದೇವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬಜರಂಗ ತಮಗೊಂಡ, ಶಿವಕುಮಾರ, ಮಂಜುನಾಥ, ಮೋಹನ್ ಸಾಗರ, ನರಸಪ್ಪ ಬಜಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>